ರೈತ ಕುಟುಂಬಕ್ಕೆ ಎಂ. ಬಿ. ಪಾಟೀಲ ರೂ. 5 ಲಕ್ಷ ಪರಿಹಾರದ ಚೆಕ್ ವಿತರಣೆ
M. B. Patil distributes Rs. 5 lakh compensation cheque to farmer family
ವಿಜಯಪುರ 22: ಹೊಲದಲ್ಲಿ ಬೆಳೆಗಳಿಗೆ ನೀರುಣಿಸಲು ತೆರಳಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವೀಗೀಡಾದ ಇಬ್ಬರು ಸಹೋದರರ ಕುಟುಂಬಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸರಕಾರದ ವತಿಯಿಂದ ತಲಾ ರೂ. 5 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.
ತಿಕೋಟಾ ತಾಲೂಕಿನ ಬಾಬಾನಗರದ ರೈತ ಕುಟುಂಬದ ರೈತ ಸಹೋದರರಾದ ರಾಜು ವಿಜಾಪುರ ಮತ್ತು ಶ್ರೀಕಾಂತ ವಿಜಾಪುರ ಅವರುಗಳು ಕಳೆದ ವರ್ಷ ತಮ್ಮ ಹೊಲದಲ್ಲಿ ಬೆಳೆಗಳಿಗೆ ನೀರುಣಿಸಲು ಹೋಗಿದ್ದಾಗ ಅಚಾನಕ್ ಆಗಿ ವಿದ್ಯುತ್ ತಂತಿ ತಗುಲಿ ಸಾವೀಗೀಡಾಗಿದ್ದರು. ಈ ಘಟನೆಯ ಬಳಿಕ ಸಚಿವರು ಕೂಡಲೇ ಅವರ ಮನೆಗೆ ತೆರಳಿ, ದುಃಖದಲ್ಲಿದ್ದ ಕುಟುಂಬಸ್ಥರನ್ನು ಭೇಟಿಮಾಡಿ ಸಾಂತ್ವನ ಹೇಳಿ, ಸರಕಾರದಿಂದ ಸೂಕ್ತ ಪರಿಹಾರದ ಭರವಸೆ ನೀಡಿದ್ದರು. ಆ ಭರವಸೆಯಂತೆ ಸಚಿವರು ಇಂದು ಸೋಮವಾರ ಮೃತ ಸಹೋದರರ ಮನೆಗೆ ತೆರಳಿದ ಸಚಿವರು ವಿಜಾಪುರ ಸಹೋದರರ ಕುಟುಂಬ ಸದಸ್ಯರಾದ ಕುಸುಮಾ ರಾಜಕುಮಾರ ವಿಜಾಪುರ ಮತ್ತು ರೇಖಾ ಶ್ರೀಕಾಂತ ವಿಜಾಪುರ ಅವರಿಗೆ ಸರಕಾರದ ವತಿಯಿಂದ ಎರಡೂ ಕುಟುಂಬಕ್ಕೂ ತಲಾ ರೂ. 5 ಲಕ್ಷ ಪರಿಹಾರದ ಚೆಕ್ ವಿತರಿಸಿದರು.ಬಳಿಕ ಮಾತನಾಡಿದ ಸಚಿವರು, ಸರಕಾರ ನೀಡಿರುವ ಈ ಹಣವನ್ನು ಬ್ಯಾಂಕಿನಲ್ಲಿ ಠೇವಣಿ ಇಟ್ಟು, ಮೃತರ ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ದುಂಡಪ್ಪ ವಿಜಾಪುರ, ಈರನಗೌಡ ರುದ್ರಗೌಡರ, ಸಿದಗೊಂಡ ರುದ್ರಗೌಡರ, ಸುಭಾಸ್ ಅಕ್ಕಿ, ಜೊತೇಂದ್ರ ಆಯತವಾಡ, ಯಲ್ಲಾಲಿಂಗ ಹೊನವಾಡ, ಕಾಶಿರಾಯ ಡೆಂಗನವರ, ಹಣಮಂತ್ ಪೂಜಾರಿ, ಯೆಲ್ಲಪ್ಪ ಹೊನಕಟ್ಟಿ, ಸಂತೋಷ ಹೊನವಾಡ, ಅಹ್ಮದ್ ಅಲಿ ಮಕಂದರ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 