ಎಂ. ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ
M. Narayanaswamy takes charge
ಬಳ್ಳಾರಿ, ಡಿ.2: ಬಳ್ಳಾರಿ ಜಿಲ್ಲಾ ಸವಿತಾ ಸಮಾಜದ ನೂತನ ಜಿಲ್ಲಾಧ್ಯಕ್ಷರಾದ ಆಯ್ಕೆಯಾದ ಎಂ. ನಾರಾಯಣಸ್ವಾಮಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಇದರ ಅಂಗವಾಗಿ ಕೌಲ್ಬಜಾರ್ನಲ್ಲಿರುವ ಸವಿತಾ ಸಮಾಜದ ಸಮುದಾಯ ಭವನದಲ್ಲಿ ಇಂದು ಕಾರ್ಯಕ್ರಮವನ್ನು ಏರಿ್ಡಸಲಾಗಿತ್ತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸವಿತಾ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರಾದ ಹೆಚ್.ತಿಪ್ಪಣ್ಣ ಅವರು ನೂತನ ಜಿಲ್ಲಾಧ್ಯಕ್ಷರಿಗೆ ಅಧಿಕಾರ ಪ್ರಮಾಣ ಪತ್ರ ನೀಡಿದರು. ಬಳ್ಳಾರಿ ಜಿಲ್ಲಾ, ತಾಲ್ಲೂಕು, ಹೋಬಳಿ, ಗ್ರಾಮ ಘಟಕಗಳ ಸವಿತಾ ಸಮಾಜದ ಹಲವಾರು ಬಾಂಧವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿ ನೂತನ ಜಿಲ್ಲಾಧ್ಯಕ್ಷರಾದ ಎಂ.ನಾರಾಯಣಸ್ವಾಮಿ ಅವರು ನಮ್ಮ ತಂಡದ ಸಹಕಾರದಿಂದ, ಮುಖಂಡರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಸಮಾಜದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದರು. ನನ್ನ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಹಾಜರಿದ್ದ ಎಲ್ಲಾ ಸದಸ್ಯರಿಗೆ ತುಂಬು ಹೃದಯ ಧನ್ಯವಾದಗಳನ್ನು ಸಲ್ಲಿಸಿದರು. ಬಳ್ಳಾರಿ ಜಿಲ್ಲೆಯ ಸಮಸ್ತ ತಾಲ್ಲೂಕುಗಳ ಪದಾಧಿಕಾರಿಗಳ ಸಲಹೆ ಸೂಚನೆಗಳನ್ನು ತಾವು ಖುದ್ದಾಗಿ ಆಲಿಸಿ, ಅವರ ಪರಿಹಾರಕ್ಕೆ ಒತ್ತು ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಆರ್.ಶೇಖಣ್ಣ, ನಗರ ಅಧ್ಯಕ್ಷ ಉಮೇಶ್, ಜಿಲ್ಲಾ ಮುಖಂಡರಾದ ಬಿ.ಜಾನಕಿರಾಮ್, ಎಲ್.ರಾಮು, ಬಾಲಕೃಷ್ಣ, ವಿ.ವೆಂಕಟೇಶ್, ಎಂ.ದೇವಣ್ಣ, ಹೆಚ್.ನಾಗೇಶ್, ವೈ.ತಿಪ್ಪೇಸ್ವಾಮಿ, ವೈ.ಶಿವಕುಮಾರ್, ಎಂ.ಭಾಸ್ಕರ್, ಎಂ.ಅಶೋಕ್ಕುಮಾರ್, ರಾಮಕೃಷ್ಣ, ಎಂ.ಅಯ್ಯಪ್ಪ, ಹೆಚ್.ಹನುಮಂತರಾಯುಡು, ಎನ್. ಮಹಾಂತೇಶ್, ರಾಮಣ್ಣ, ಭೀಮ ತಾಳೂರು, ವೀರೇಂದ್ರ ಸಿರುಗುಪ್ಪ, ಸಣ್ಣ ತಿಮ್ಮಪ್ಪ, ಪಾಂಡುರಂಗಪ್ಪ, ಸಣ್ಣ ತಿಪ್ಪೇಸ್ವಾಮಿ, ಕೃಷ್ಣಮೂರ್ತಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 