ಎಂ. ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ
M. Narayanaswamy takes charge
ಬಳ್ಳಾರಿ, ಡಿ.2: ಬಳ್ಳಾರಿ ಜಿಲ್ಲಾ ಸವಿತಾ ಸಮಾಜದ ನೂತನ ಜಿಲ್ಲಾಧ್ಯಕ್ಷರಾದ ಆಯ್ಕೆಯಾದ ಎಂ. ನಾರಾಯಣಸ್ವಾಮಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಇದರ ಅಂಗವಾಗಿ ಕೌಲ್ಬಜಾರ್ನಲ್ಲಿರುವ ಸವಿತಾ ಸಮಾಜದ ಸಮುದಾಯ ಭವನದಲ್ಲಿ ಇಂದು ಕಾರ್ಯಕ್ರಮವನ್ನು ಏರಿ್ಡಸಲಾಗಿತ್ತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸವಿತಾ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರಾದ ಹೆಚ್.ತಿಪ್ಪಣ್ಣ ಅವರು ನೂತನ ಜಿಲ್ಲಾಧ್ಯಕ್ಷರಿಗೆ ಅಧಿಕಾರ ಪ್ರಮಾಣ ಪತ್ರ ನೀಡಿದರು. ಬಳ್ಳಾರಿ ಜಿಲ್ಲಾ, ತಾಲ್ಲೂಕು, ಹೋಬಳಿ, ಗ್ರಾಮ ಘಟಕಗಳ ಸವಿತಾ ಸಮಾಜದ ಹಲವಾರು ಬಾಂಧವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿ ನೂತನ ಜಿಲ್ಲಾಧ್ಯಕ್ಷರಾದ ಎಂ.ನಾರಾಯಣಸ್ವಾಮಿ ಅವರು ನಮ್ಮ ತಂಡದ ಸಹಕಾರದಿಂದ, ಮುಖಂಡರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಸಮಾಜದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದರು. ನನ್ನ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಹಾಜರಿದ್ದ ಎಲ್ಲಾ ಸದಸ್ಯರಿಗೆ ತುಂಬು ಹೃದಯ ಧನ್ಯವಾದಗಳನ್ನು ಸಲ್ಲಿಸಿದರು. ಬಳ್ಳಾರಿ ಜಿಲ್ಲೆಯ ಸಮಸ್ತ ತಾಲ್ಲೂಕುಗಳ ಪದಾಧಿಕಾರಿಗಳ ಸಲಹೆ ಸೂಚನೆಗಳನ್ನು ತಾವು ಖುದ್ದಾಗಿ ಆಲಿಸಿ, ಅವರ ಪರಿಹಾರಕ್ಕೆ ಒತ್ತು ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಆರ್.ಶೇಖಣ್ಣ, ನಗರ ಅಧ್ಯಕ್ಷ ಉಮೇಶ್, ಜಿಲ್ಲಾ ಮುಖಂಡರಾದ ಬಿ.ಜಾನಕಿರಾಮ್, ಎಲ್.ರಾಮು, ಬಾಲಕೃಷ್ಣ, ವಿ.ವೆಂಕಟೇಶ್, ಎಂ.ದೇವಣ್ಣ, ಹೆಚ್.ನಾಗೇಶ್, ವೈ.ತಿಪ್ಪೇಸ್ವಾಮಿ, ವೈ.ಶಿವಕುಮಾರ್, ಎಂ.ಭಾಸ್ಕರ್, ಎಂ.ಅಶೋಕ್ಕುಮಾರ್, ರಾಮಕೃಷ್ಣ, ಎಂ.ಅಯ್ಯಪ್ಪ, ಹೆಚ್.ಹನುಮಂತರಾಯುಡು, ಎನ್. ಮಹಾಂತೇಶ್, ರಾಮಣ್ಣ, ಭೀಮ ತಾಳೂರು, ವೀರೇಂದ್ರ ಸಿರುಗುಪ್ಪ, ಸಣ್ಣ ತಿಮ್ಮಪ್ಪ, ಪಾಂಡುರಂಗಪ್ಪ, ಸಣ್ಣ ತಿಪ್ಪೇಸ್ವಾಮಿ, ಕೃಷ್ಣಮೂರ್ತಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 