ಎಂ.ಶಾಂತರಾಜ್ ಗೆ ಸದ್ಭಾವನಾ ವೇದಿಕೆಯಿಂದ ಸನ್ಮಾನ
M. Shantharaj honored by Sadbhavana Vedike
ಕೊಪ್ಪಳ 16 : ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ತಾಂತ್ರಿಕ ವಿಭಾಗದಲ್ಲಿ 31 ವರ್ಷ 5 ತಿಂಗಳುಗಳ ಕಾಲ ಸೇವಾ ಕಾರ್ಯ ಕಾರ್ಯನಿರ್ವಹಿಸಿ ಎಂ .ಶಾಂತರಾಜ್ ರವರು ಇದೇ ತಿಂಗಳ ಐದು ರಂದು ವಯೋ ನಿವೃತ್ತಿ ಹೊಂದಿದ್ದಾರೆ.
ಈ ಸಂದರ್ಭ ದಲ್ಲಿ ಅವರಿಗೆ ಕೊಪ್ಪಳ ಸದ್ಭಾವನಾ ವೇದಿಕೆ ವತಿಯಿಂದ ಅಧ್ಯಕ್ಷರಾದ ಡಾ. ಸುಶೀಲ್ ಕುಮಾರ್ ಕಲಾಲ್ ರವರ ನೇತೃತ್ವ ದಲ್ಲಿ ವೇದಿಕೆಯ ಪದಾಧಿಕಾರಿಗಳು ಸೇರಿ ಸನ್ಮಾನ ಮಾಡಿ ಅವರನ್ನು ಶುಭ ಕೋರಿ ಅಭಿನಂದಿಸಲಾಯಿತು, ಎಂ.ಶಾಂತರಾಜ್ ರವರು ಕೊಪ್ಪಳ ಸದ್ಭಾವನಾ ವೇದಿಕೆ ಯಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸುತ್ತಾ ಪ್ರತಿಯೊಬ್ಬರಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವಂತಹ ದಿಶೆಯಲ್ಲಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಅವರು ಈಗ ವಯೋ ನಿವೃತ್ತಿ ಹೊಂದಿದ್ದು ಈಗ ವೇದಿಕೆಯಲ್ಲಿ ಪೂರ್ಣ ಪ್ರಮಾಣ ದಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ಸೇವೆ ಸಲ್ಲಿಸಲಿ ಎಂದು ಶುಭ ಹಾರೈಸಲಾಯಿತು.ಅಲ್ಲದೆ ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸುತ್ತಾ ಸಂದರ್ಭದಲ್ಲಿ 2006ರಲ್ಲಿ ಕಾರ್ಖಾನೆಯ ಅತ್ಯುತ್ತಮ "ಸುರಕ್ಷತಾ ಉದ್ಯೋಗಿ "ಎಂದು ರಾಜ್ಯ ಸರ್ಕಾರದಿಂದ ಪ್ರಶಸ್ತಿ ಕೂಡ ಲಭಿಸಿದೆ ಅಲ್ಲದೆ ವಿವಿಧ ಪ್ರಶಸ್ತಿ ಕೂಡ ಇವರ ಉತ್ತಮ ಸೇವೆಗಾಗಿ ಲಭಿಸಿರುವುದು ಇಲ್ಲಿ ಸ್ಮರಿಸಬಹುದಾಗಿದೆ.
ಈ ಸಂದರ್ಭದಲ್ಲಿ ಕೊಪ್ಪಳ ಸದ್ಭಾವನಾ ವೇದಿಕೆ ಅಧ್ಯಕ್ಷ ಡಾ, ಸುಶೀಲ್ ಕುಮಾರ್ ಕಲಾಲ್ ಸೇರಿದಂತೆ ವೇದಿಕೆಯ ಕಾರ್ಯದರ್ಶಿ ಸೈಯದ್ ಹಿದಾಯತ್ ಅಲಿ ಅಲ್ಲದೆ ಹೋರಾಟಗಾರ ಡಿ.ಎಚ್. ಪೂಜಾರ್ ಸಾಹಿತಿ ಪತ್ರಕರ್ತ ಜಿ.ಎಸ್. ಗೋನಾಳ, ಈಶ್ವರ್ ಕೊರಲಹಳ್ಳಿ ನ್ಯಾಯವಾದಿ ಅಮರೇಶ್ ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 