ಎಂ.ಶಾಂತರಾಜ್ ಗೆ ಸದ್ಭಾವನಾ ವೇದಿಕೆಯಿಂದ ಸನ್ಮಾನ
M. Shantharaj honored by Sadbhavana Vedike
ಕೊಪ್ಪಳ 16 : ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ತಾಂತ್ರಿಕ ವಿಭಾಗದಲ್ಲಿ 31 ವರ್ಷ 5 ತಿಂಗಳುಗಳ ಕಾಲ ಸೇವಾ ಕಾರ್ಯ ಕಾರ್ಯನಿರ್ವಹಿಸಿ ಎಂ .ಶಾಂತರಾಜ್ ರವರು ಇದೇ ತಿಂಗಳ ಐದು ರಂದು ವಯೋ ನಿವೃತ್ತಿ ಹೊಂದಿದ್ದಾರೆ.
ಈ ಸಂದರ್ಭ ದಲ್ಲಿ ಅವರಿಗೆ ಕೊಪ್ಪಳ ಸದ್ಭಾವನಾ ವೇದಿಕೆ ವತಿಯಿಂದ ಅಧ್ಯಕ್ಷರಾದ ಡಾ. ಸುಶೀಲ್ ಕುಮಾರ್ ಕಲಾಲ್ ರವರ ನೇತೃತ್ವ ದಲ್ಲಿ ವೇದಿಕೆಯ ಪದಾಧಿಕಾರಿಗಳು ಸೇರಿ ಸನ್ಮಾನ ಮಾಡಿ ಅವರನ್ನು ಶುಭ ಕೋರಿ ಅಭಿನಂದಿಸಲಾಯಿತು, ಎಂ.ಶಾಂತರಾಜ್ ರವರು ಕೊಪ್ಪಳ ಸದ್ಭಾವನಾ ವೇದಿಕೆ ಯಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸುತ್ತಾ ಪ್ರತಿಯೊಬ್ಬರಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವಂತಹ ದಿಶೆಯಲ್ಲಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಅವರು ಈಗ ವಯೋ ನಿವೃತ್ತಿ ಹೊಂದಿದ್ದು ಈಗ ವೇದಿಕೆಯಲ್ಲಿ ಪೂರ್ಣ ಪ್ರಮಾಣ ದಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ಸೇವೆ ಸಲ್ಲಿಸಲಿ ಎಂದು ಶುಭ ಹಾರೈಸಲಾಯಿತು.ಅಲ್ಲದೆ ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸುತ್ತಾ ಸಂದರ್ಭದಲ್ಲಿ 2006ರಲ್ಲಿ ಕಾರ್ಖಾನೆಯ ಅತ್ಯುತ್ತಮ "ಸುರಕ್ಷತಾ ಉದ್ಯೋಗಿ "ಎಂದು ರಾಜ್ಯ ಸರ್ಕಾರದಿಂದ ಪ್ರಶಸ್ತಿ ಕೂಡ ಲಭಿಸಿದೆ ಅಲ್ಲದೆ ವಿವಿಧ ಪ್ರಶಸ್ತಿ ಕೂಡ ಇವರ ಉತ್ತಮ ಸೇವೆಗಾಗಿ ಲಭಿಸಿರುವುದು ಇಲ್ಲಿ ಸ್ಮರಿಸಬಹುದಾಗಿದೆ.
ಈ ಸಂದರ್ಭದಲ್ಲಿ ಕೊಪ್ಪಳ ಸದ್ಭಾವನಾ ವೇದಿಕೆ ಅಧ್ಯಕ್ಷ ಡಾ, ಸುಶೀಲ್ ಕುಮಾರ್ ಕಲಾಲ್ ಸೇರಿದಂತೆ ವೇದಿಕೆಯ ಕಾರ್ಯದರ್ಶಿ ಸೈಯದ್ ಹಿದಾಯತ್ ಅಲಿ ಅಲ್ಲದೆ ಹೋರಾಟಗಾರ ಡಿ.ಎಚ್. ಪೂಜಾರ್ ಸಾಹಿತಿ ಪತ್ರಕರ್ತ ಜಿ.ಎಸ್. ಗೋನಾಳ, ಈಶ್ವರ್ ಕೊರಲಹಳ್ಳಿ ನ್ಯಾಯವಾದಿ ಅಮರೇಶ್ ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 