ಜಮೀನಿಗೆ ಕೃಷಿ ಅಧಿಕಾರಿ ಎಂ.ದೇವರಾಜ್ ಭೇಟಿ ನೀಡಿ ಪರಿಶೀಲನೆ
ಕುರುಗೋಡು08: ಮಣ್ಣಿನ ಫಲವತ್ತತೆ ಹೆಚ್ಚಾಗಲು ಹಸಿರು ಎಲೆ ಗೊಬ್ಬರ ರೈತರಿಗೆ ಸಹಕಾರಿಯಾಗುತ್ತಿದೆ ಎಂದು ಕೃಷಿ ಅಧಿಕಾರಿ ಎಂ.ದೇವರಾಜ್ ಹೇಳಿದರು.
ಪಟ್ಟಣ ಸಮೀಪದ ಮುಷ್ಟಗಟ್ಟೆ ಗ್ರಾಮದಲ್ಲಿ ಸುಣಗಾರ ನಾಗಪ್ಪ ಎಂಬ ರೈತ ಬೆಳೆದ ಹಸಿರು ಎಲೆ ಗೊಬ್ಬರದ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
ರೈತರು ಹಸಿರು ಎಲೆ ಗೊಬ್ಬರ ಬೆಳೆಯುವುದರಿಂದ ಮಣ್ಣಿನಲ್ಲಿ ಸೂಕ್ಷ್ಮಣ ಜೀವಿಗಳು ಹೆಚ್ಚಾಗಿ ಮಣ್ಣಿನಲ್ಲಿ ರೋಗ ನಿರೋಧಕ ಶಕ್ತಿ ಅಧಿಕವಾಗುತ್ತದೆ ಆದ್ದರಿಂದ ರೈತರು ಅಧಿಕ ಸಂಖ್ಯೆಯಲ್ಲಿ ಹಸಿರು ಎಲೆಗೊಬ್ಬರದ ಬೆಳೆಯನ್ನು ಬೆಳೆಯಲು ಮುಂದಾಗಬೇಕೆಂದು ತಿಳಿಸಿದರು. ಅಲ್ಲದೆ ಹಸಿರು ಎಲೆ ಗೊಬ್ಬರ ಬೆಳೆಯನ್ನು ಬೆಳೆಯಲು ಕೃಷಿ ಇಲಾಖೆಯಿಂದ ಪ್ರೋತ್ಸಾಹ ಧನ ಸಿಗುವುದು ರೈತರಿಗೆ ಸಂತಸ ಮೂಡಿಸಿದೆ ಎಮದರು.
ನಂತರ ಹಸಿರು ಎಲೆಗೊಬ್ಬರ ಬೆಳೆಗಾರ ಸುಣಗಾರ ನಾಗಪ್ಪ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೈತ ಅಂಜೀನಪ್ಪ, ಪೊಂಪಾಪತಿ, ಶಾಂತಪ್ಪ, ಹೆಚ್.ವೀರಾಪುರ ಚಿದಾನಂದಪ್ಪ, ಕೆರೆಕೆರೆ ಹನುಮಂತಪ್ಪ ಸೇರಿದಂತೆ ಇತರೆ ರೈತರು ಇದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 