ಎಂ.ಎಸ್.ಖೊದ್ನಾಪೂರ ಸಾಧಕ ವಿಭೂಷಣ ಪ್ರಶಸ್ತಿಗೆ ಆಯ್ಕೆ
M.S. Khodnapur selected for the Sadhak Vibhushan Award
ವಿಜಯಪುರ 19: ಚಿಕ್ಕೋಡಿಯ ನಾಗರಮುನ್ನೋಳಿ ಕವಿತ್ತ ಕರ್ಮಮಣಿ ಫೌಂಡೇಶನ್ ಸಂಚಾಲಕ ಮಂಡಳಿ ತಿಕೋಟಾ ಪಟ್ಟಣದ ಎಂ.ಎಸ್.ಖೊದ್ನಾಪೂರ ಇವರು ಶೈಕ್ಷಣಿಕ, ಸಾಹಿತ್ಯ, ಭಾಷೆ, ನೆಲ-ಜಲ, ಸಂಸ್ಕೃತಿ ಕ್ಷೇತ್ರಗಳಲ್ಲಿನ ಗಣನೀಯ ಸೇವೆ-ಸಾಧನೆಯನ್ನು ಗುರುತಿಸಿ, ರಾಷ್ಟ್ರಮಟ್ಟದ ಸಾಧಕ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ವ್ಯಕ್ತಿತ್ವ ವಿಕಸನ, ಜೀವನ-ಕಲೆ, ಕೌಶಲ್ಯ ಮತ್ತು ವಿದ್ಯಾರ್ಥಿಗಳಿಗೆ ಸಾಧನೆಗೆ ಪ್ರೇರಣಾದಾಯಕವಾದ ಮತ್ತು ಯಶೋಗಾಥೆ ಅಂತಹ ವಿಷಯಗಳ ಮೇಲೆ 250 ಕ್ಕೂ ಹೆಚ್ಚು ಲೇಖನಗಳು ನಾಡಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುತ್ತವೆ. ಇವರಿಗೆ ಇದೇ ಜುಲೈ 27 ರಂದು ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕವಿತ್ತ ಕರ್ಮಮಣಿ ಫೌಂಡೇಶನ್ ಅಧ್ಯಕ್ಷ ಶ್ರೀ ಎಲ್.ಎಚ್.ಪೆಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಇವರು ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಾಧನೆಗೆ ತಿಕೋಟಾ ಗೆಳೆಯರ ಬಳಗ, ಕುಡುವಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ವೇದಿಕೆ ಹಾಗೂ ಬಂಧು-ಬಳಗದವರು ಅಭಿನಂದಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 