ಎಂ.ಎಸ್.ಖೊದ್ನಾಪೂರ ಸಾಧಕ ವಿಭೂಷಣ ಪ್ರಶಸ್ತಿಗೆ ಆಯ್ಕೆ
M.S. Khodnapur selected for the Sadhak Vibhushan Award
ವಿಜಯಪುರ 19: ಚಿಕ್ಕೋಡಿಯ ನಾಗರಮುನ್ನೋಳಿ ಕವಿತ್ತ ಕರ್ಮಮಣಿ ಫೌಂಡೇಶನ್ ಸಂಚಾಲಕ ಮಂಡಳಿ ತಿಕೋಟಾ ಪಟ್ಟಣದ ಎಂ.ಎಸ್.ಖೊದ್ನಾಪೂರ ಇವರು ಶೈಕ್ಷಣಿಕ, ಸಾಹಿತ್ಯ, ಭಾಷೆ, ನೆಲ-ಜಲ, ಸಂಸ್ಕೃತಿ ಕ್ಷೇತ್ರಗಳಲ್ಲಿನ ಗಣನೀಯ ಸೇವೆ-ಸಾಧನೆಯನ್ನು ಗುರುತಿಸಿ, ರಾಷ್ಟ್ರಮಟ್ಟದ ಸಾಧಕ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ವ್ಯಕ್ತಿತ್ವ ವಿಕಸನ, ಜೀವನ-ಕಲೆ, ಕೌಶಲ್ಯ ಮತ್ತು ವಿದ್ಯಾರ್ಥಿಗಳಿಗೆ ಸಾಧನೆಗೆ ಪ್ರೇರಣಾದಾಯಕವಾದ ಮತ್ತು ಯಶೋಗಾಥೆ ಅಂತಹ ವಿಷಯಗಳ ಮೇಲೆ 250 ಕ್ಕೂ ಹೆಚ್ಚು ಲೇಖನಗಳು ನಾಡಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುತ್ತವೆ. ಇವರಿಗೆ ಇದೇ ಜುಲೈ 27 ರಂದು ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕವಿತ್ತ ಕರ್ಮಮಣಿ ಫೌಂಡೇಶನ್ ಅಧ್ಯಕ್ಷ ಶ್ರೀ ಎಲ್.ಎಚ್.ಪೆಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಇವರು ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಾಧನೆಗೆ ತಿಕೋಟಾ ಗೆಳೆಯರ ಬಳಗ, ಕುಡುವಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ವೇದಿಕೆ ಹಾಗೂ ಬಂಧು-ಬಳಗದವರು ಅಭಿನಂದಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 