ಎಮ್.ಎಸ್. ಶೇಷಗಿರಿ ಕಾಲೇಜಿನ ವಿದ್ಯಾರ್ಥಿ ಗಳಿಂದ ಮತದಾನ ಜಾಗೃತಿ ಅಭಿಯಾನ
ಎಮ್.ಎಸ್. ಶೇಷಗಿರಿ ಕಾಲೇಜಿನ ವಿದ್ಯಾರ್ಥಿ ಗಳಿಂದ ಮತದಾನ ಜಾಗೃತಿ ಅಭಿಯಾನ
ಬೆಳಗಾವಿ18: ಕೆ.ಎಲ್. ಇ. ಡಾ. ಎಮ್.ಎಸ್. ಶೇಷಗಿರಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇನ್ನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಪತ್ರಿಕೆ ಸಮೂಹದ ಅಶ್ವಿನ್ ಮುತಗೇಕರ ಮಾತನಾಡುತ್ತ ಪ್ರತಿಯೊಂದು ಮತವು ಅಮೂಲ್ಯ ವಿದ್ಯಾರ್ಥಿ ಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ಹಾಗೂ ತಪ್ಪದೆ ಮತದಾನ ಮಾಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚಾರ್ಯ ಡಾ. ಬಸವರಾಜ ಕಟಗೇರಿ 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ದೇಶದ ಹಿತದೃಷ್ಠಿ ಹಾಗೂ ಅಭಿವೃದ್ಧಿಗಾಗಿ ಮತದಾನ ಮಾಡುವುದು
ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ನಂತರ ಪತ್ರಿಕಾ ಬಳಗದವರು ವಿವಿಧ ತರಗತಿಗಳಿಗೆ ಹಾಗೂ ವಸತಿನಿಲಯಕ್ಕೆ ತೆರಳಿ ವಿದ್ಯಾಥರ್ಿಗಳಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಪತ್ರಿಕಾ ಬಳಗದ ಪ್ರಮೋದ ಗುಂಗಾ, ಧರ್ಮರಾಜ ಹಡಪದ ಪ್ರಾಧ್ಯಾಪಕರು ಹಾಗೂ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 