ತ್ಯಾಜ್ಯ ಸುರಿದ ಮೆಟ್ರೋಗೆ ನೋಟಿಸ್: ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ
ಬೆಂಗಳೂರು,ಮಾ.9,ಆಡುಗೋಡಿಯಲ್ಲಿ ನಿಗೂಢ ಸ್ಫೋಟ ಪ್ರಕರಣದ ಘಟನಾ ಸ್ಥಳಕ್ಕೆ ಸೋಮವಾರ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಆಯುಕ್ತ ಅನಿಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ತ್ಯಾಜ್ಯ ಸುರಿದಿರುವ ಮೆಟ್ರೋಗೆ ನೋಟಿಸ್ ನೀಡಿ ಹಾಗೂ ಸ್ಥಳ ಸ್ವಚ್ಛವಾಗಿಟ್ಟುಕೊಳ್ಳದ ಮನೆಗಳಿಗೆ ದಂಡ ವಿಧಿಸಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೂಚನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಫೋಟದಲ್ಲಿ 60 ವರ್ಷದ ನರಸಿಂಹಯ್ಯ ಎಂಬುವವರ ಎಡಗಾಲು ಛಿದ್ರವಾಗಿತ್ತು. ಆದ್ದರಿಂದ ವೈದ್ಯರು ವ್ಯಕ್ತಿಯ ಕಾಲನ್ನು ಕಟ್ ಮಾಡಿದ್ದಾರೆ. ಸದ್ಯ ನರಸಿಂಹಯ್ಯ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದರು.ನರಸಿಂಹಯ್ಯ ಅವರ ಸಂಪೂರ್ಣ ವೆಚ್ಚವನ್ನು ಬಿಬಿಎಂಪಿಯೇ ಭರಸಲಿದೆ. ಸ್ಥಳದಲ್ಲಿ ಕಸ ಚೆಲ್ಲಿದ ಮನೆ ಮಾಲೀಕರಿಗೆ ದಂಡ ವಿಧಿಸಲಾಗುವುದು. ಅಲ್ಲದೇ, ತ್ಯಾಜ್ಯ ಸುರಿದಿರುವ ಮೆಟ್ರೋಗೆ ನೋಟಿಸ್ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 