ಅಭಿವೃದ್ದಿ ಕಾಮಗಾರಿಗೆ ಶಾಸಕ ಐಹೊಳೆ ಚಾಲನೆ
MLA Aihole drive for development work
ರಾಯಬಾಗ, 15 ; ಪ.ಜಾತಿ ಕಾಲೊನಿಯಲ್ಲಿ ರಸ್ತೆ, ಚರಂಡಿ ನಿರ್ಮಾಣ ಮಾಡುವುದರ ಮೂಲಕ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಮಂಗಳವಾರ ತಾಲೂಕಿನ ಚಿಂಚಲಿ ಪಟ್ಟಣದ ಅಜೀತ ನಗರ ಹಾಗೂ ಭಿರಡಿ ಗ್ರಾಮದ ಪ.ಜಾತಿ ಜನಪ್ರದೇಶದಲ್ಲಿ ಜಿ.ಪಂ.ಇಲಾಖೆಯ ಎಸ್.ಸಿ.ಪಿ.ಟಿ.ಎಸ್.ಪಿ ಯೋಜನೆಯಡಿ ಮಂಜೂರಾದ ಒಟ್ಟು 1 ಕೋಟಿ ರೂ. ಅನುದಾನದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದರು.ಅಂಕುಶ ಜಾಧವ, ಸದಾಶಿವ ಘೋರೆ್ಡ, ಮಹಾದೇವ ಬೋರಗಾಂವೆ, ರಮೇಶ ಹಾರೂಗೇರಿ, ಲಕ್ಷ್ಮಣ ತುಳಸಿಗೇರಿ, ಸುಭಾಷ್ ಕೋರೆ, ರಾಜು ಮಹೇಶ್ವರಿ, ಮುರುಗೇಶ ನಿಶಾನದಾರ, ರಾಮಚಂದ್ರ ಮೈಶಾಳೆ, ಕಲ್ಮೇಶ ನಿಡವಣಿ, ಕೆಂಪಣ್ಣ ಮೈಶಾಳೆ, ಮಹಾದೇವ ಜೋಗಿ, ರಾಜು ಪೋಳ, ವಿಲಾಸ ಬಸನಾಯ್ಕ, ಸಹದೇವ ಯಡ್ರಾವಿ, ಕುಮಾರ ಖೋತ, ಬಾಹುಬಲಿ ಹಂಡೆಗೆ, ವಸಂತ ಕರಾಕಾಯಿ, ಕಿರಣ ಪಾಟೀಲ ಸೇರಿ ಅನೇಕರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 