ಕಾಮಗಾರಿ ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಶಾಸಕ ಐಹೊಳೆ ಸೂಚನೆ
MLA Aihole instructs officials to complete the work soon
ರಾಯಬಾಗ, 17 : ತಾಲೂಕಿನ ಬಾವನಸೌಂದತ್ತಿ ಗ್ರಾಮದ ಕೃಷ್ಣಾ ನದಿ ದಡದಲ್ಲಿ ನಿರ್ಮಿಸುತ್ತಿರುವ ಕೆರೆ ತುಂಬುವ ಯೋಜನೆ ಕಾಮಗಾರಿಯ ಜಾಕ್ವೇಲ್ನ್ನು ಶಾಸಕ ಡಿ.ಎಮ್.ಐಹೊಳೆರವರು ಮಂಗಳವಾರ ವಿಕ್ಷಣೆ ನಡೆಸಿ, ಕಾಮಗಾರಿ ಶೀಘ್ರವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ತಾಲೂಕಿನ 39 ಕೆರೆ ತುಂಬಿಸುವ ಯೋಜನೆ ಕಾಮಗಾರಿ ಈಗಾಗಲೇ ಪ್ರತಿಶತ 90 ರಷ್ಟು ಕಾಮಗಾರಿ ಮುಗದಿದ್ದು, ಇನ್ನುಳಿದ ಕಾಮಗಾರಿ ಬೇಗನೆ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ವಿದ್ಯುತ್ ಸಂಪರ್ಕ ನೀಡುವುದು ಬಾಕಿ ಉಳಿದಿದ್ದು, ಅದನ್ನು ಕೂಡ ಈಗ ಅಧಿಕಾರಿಗಳೊಂದಿಗೆ ಮಾತನಾಡಿ ಬಗೆ ಹರಿಸಲಾಗಿದೆ ಎಂದು ತಿಳಿಸಿದರು. ಸುಮಾರು 100 ಕೋಟಿ ರೂ. ವೆಚ್ಚದ ಕೆರೆ ತುಂಬಿಸುವ ಯೋಜನೆಯಿಂದ ದಕ್ಷಿಣ ಭಾಗದ ಮಳೆ ಆಶ್ರಿತ ಪ್ರದೇಶಗಳ ಜನ-ಜಾನುವಾರುಗಳಿಗೆ ಹಾಗೂ ಅಂತರಜಲ ಮಟ್ಟ ಹೆಚ್ಚಿಸಲು ಅನುಕೂಲವಾಗಲಿದೆ ಎಂದರು. ಮಳೆಗಾಲದಲ್ಲಿ ಕೃಷ್ಣಾ ನದಿ ನೀರು ತುಂಬಿ ಹರಿಯುತ್ತಿರುವುದರಿಂದ, ಹೆಸ್ಕಾಂ ಇಲಾಖೆಯವರು 33 ಕೆವ್ಹಿ ವಿದ್ಯುತ್ ಸಂಪರ್ಕ ತಕ್ಷಣ ನೀಡಬೇಕು. ಕೆರೆ ತುಂಬುವ ಯೋಜನೆ ಮುಗಿದ ಕೂಡಲೇ ಇಲ್ಲಿಂದ ನೀರನ್ನು ಎತ್ತಿ ಕೆರೆಗಳಿಗೆ ಹರಿಸಲಾಗುವುದು ಎಂದು ತಿಳಿಸಿದರು.
ನೀರಾವರಿ ಅಧಿಕಾರಿಗಳಾದ ಇಇ ಎಸ್.ಎಸ್.ಕರಿಗಾರ, ಎಇಇ ಕಲ್ಮೇಶ ಕಮಲಾಕರ, ಗ್ರಾ.ಪಂ.ಅಧ್ಯಕ್ಷ ರಾಮಚಂದ್ರ ಕಾಟೆ, ಅನೀಲ ಹಂಜೆ, ಮಹಾವೀರ ಪಾಟೀಲ, ದಶರಥ ಕಾಟೆ, ಅಜೀತ ಖೆಮಲಾಪೂರೆ, ಸತ್ಯಪ್ಪ ಬಿಷ್ಠೆ, ರಮಜಾನ ಮಕಂದಾರ, ಶ್ರೀಕಾಂತ ಮಂಗಸೂಳೆ, ಜಿನ್ನಪ್ಪ ಚಂಪು, ಅರುಣ ಶಿಂದೆ, ಶಾಮ ಕಾಂಬಳೆ, ದೇವಪ್ಪ ಗಾಂಜೆ ಸೇರಿ ಅನೇಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 