ಕಾಮಗಾರಿ ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಶಾಸಕ ಐಹೊಳೆ ಸೂಚನೆ
MLA Aihole instructs officials to complete the work soon
ರಾಯಬಾಗ, 17 : ತಾಲೂಕಿನ ಬಾವನಸೌಂದತ್ತಿ ಗ್ರಾಮದ ಕೃಷ್ಣಾ ನದಿ ದಡದಲ್ಲಿ ನಿರ್ಮಿಸುತ್ತಿರುವ ಕೆರೆ ತುಂಬುವ ಯೋಜನೆ ಕಾಮಗಾರಿಯ ಜಾಕ್ವೇಲ್ನ್ನು ಶಾಸಕ ಡಿ.ಎಮ್.ಐಹೊಳೆರವರು ಮಂಗಳವಾರ ವಿಕ್ಷಣೆ ನಡೆಸಿ, ಕಾಮಗಾರಿ ಶೀಘ್ರವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ತಾಲೂಕಿನ 39 ಕೆರೆ ತುಂಬಿಸುವ ಯೋಜನೆ ಕಾಮಗಾರಿ ಈಗಾಗಲೇ ಪ್ರತಿಶತ 90 ರಷ್ಟು ಕಾಮಗಾರಿ ಮುಗದಿದ್ದು, ಇನ್ನುಳಿದ ಕಾಮಗಾರಿ ಬೇಗನೆ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ವಿದ್ಯುತ್ ಸಂಪರ್ಕ ನೀಡುವುದು ಬಾಕಿ ಉಳಿದಿದ್ದು, ಅದನ್ನು ಕೂಡ ಈಗ ಅಧಿಕಾರಿಗಳೊಂದಿಗೆ ಮಾತನಾಡಿ ಬಗೆ ಹರಿಸಲಾಗಿದೆ ಎಂದು ತಿಳಿಸಿದರು. ಸುಮಾರು 100 ಕೋಟಿ ರೂ. ವೆಚ್ಚದ ಕೆರೆ ತುಂಬಿಸುವ ಯೋಜನೆಯಿಂದ ದಕ್ಷಿಣ ಭಾಗದ ಮಳೆ ಆಶ್ರಿತ ಪ್ರದೇಶಗಳ ಜನ-ಜಾನುವಾರುಗಳಿಗೆ ಹಾಗೂ ಅಂತರಜಲ ಮಟ್ಟ ಹೆಚ್ಚಿಸಲು ಅನುಕೂಲವಾಗಲಿದೆ ಎಂದರು. ಮಳೆಗಾಲದಲ್ಲಿ ಕೃಷ್ಣಾ ನದಿ ನೀರು ತುಂಬಿ ಹರಿಯುತ್ತಿರುವುದರಿಂದ, ಹೆಸ್ಕಾಂ ಇಲಾಖೆಯವರು 33 ಕೆವ್ಹಿ ವಿದ್ಯುತ್ ಸಂಪರ್ಕ ತಕ್ಷಣ ನೀಡಬೇಕು. ಕೆರೆ ತುಂಬುವ ಯೋಜನೆ ಮುಗಿದ ಕೂಡಲೇ ಇಲ್ಲಿಂದ ನೀರನ್ನು ಎತ್ತಿ ಕೆರೆಗಳಿಗೆ ಹರಿಸಲಾಗುವುದು ಎಂದು ತಿಳಿಸಿದರು.
ನೀರಾವರಿ ಅಧಿಕಾರಿಗಳಾದ ಇಇ ಎಸ್.ಎಸ್.ಕರಿಗಾರ, ಎಇಇ ಕಲ್ಮೇಶ ಕಮಲಾಕರ, ಗ್ರಾ.ಪಂ.ಅಧ್ಯಕ್ಷ ರಾಮಚಂದ್ರ ಕಾಟೆ, ಅನೀಲ ಹಂಜೆ, ಮಹಾವೀರ ಪಾಟೀಲ, ದಶರಥ ಕಾಟೆ, ಅಜೀತ ಖೆಮಲಾಪೂರೆ, ಸತ್ಯಪ್ಪ ಬಿಷ್ಠೆ, ರಮಜಾನ ಮಕಂದಾರ, ಶ್ರೀಕಾಂತ ಮಂಗಸೂಳೆ, ಜಿನ್ನಪ್ಪ ಚಂಪು, ಅರುಣ ಶಿಂದೆ, ಶಾಮ ಕಾಂಬಳೆ, ದೇವಪ್ಪ ಗಾಂಜೆ ಸೇರಿ ಅನೇಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 