ಕಾಮಗಾರಿ ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಶಾಸಕ ಐಹೊಳೆ ಸೂಚನೆ
MLA Aihole instructs officials to complete the work soon
ರಾಯಬಾಗ, 17 : ತಾಲೂಕಿನ ಬಾವನಸೌಂದತ್ತಿ ಗ್ರಾಮದ ಕೃಷ್ಣಾ ನದಿ ದಡದಲ್ಲಿ ನಿರ್ಮಿಸುತ್ತಿರುವ ಕೆರೆ ತುಂಬುವ ಯೋಜನೆ ಕಾಮಗಾರಿಯ ಜಾಕ್ವೇಲ್ನ್ನು ಶಾಸಕ ಡಿ.ಎಮ್.ಐಹೊಳೆರವರು ಮಂಗಳವಾರ ವಿಕ್ಷಣೆ ನಡೆಸಿ, ಕಾಮಗಾರಿ ಶೀಘ್ರವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ತಾಲೂಕಿನ 39 ಕೆರೆ ತುಂಬಿಸುವ ಯೋಜನೆ ಕಾಮಗಾರಿ ಈಗಾಗಲೇ ಪ್ರತಿಶತ 90 ರಷ್ಟು ಕಾಮಗಾರಿ ಮುಗದಿದ್ದು, ಇನ್ನುಳಿದ ಕಾಮಗಾರಿ ಬೇಗನೆ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ವಿದ್ಯುತ್ ಸಂಪರ್ಕ ನೀಡುವುದು ಬಾಕಿ ಉಳಿದಿದ್ದು, ಅದನ್ನು ಕೂಡ ಈಗ ಅಧಿಕಾರಿಗಳೊಂದಿಗೆ ಮಾತನಾಡಿ ಬಗೆ ಹರಿಸಲಾಗಿದೆ ಎಂದು ತಿಳಿಸಿದರು. ಸುಮಾರು 100 ಕೋಟಿ ರೂ. ವೆಚ್ಚದ ಕೆರೆ ತುಂಬಿಸುವ ಯೋಜನೆಯಿಂದ ದಕ್ಷಿಣ ಭಾಗದ ಮಳೆ ಆಶ್ರಿತ ಪ್ರದೇಶಗಳ ಜನ-ಜಾನುವಾರುಗಳಿಗೆ ಹಾಗೂ ಅಂತರಜಲ ಮಟ್ಟ ಹೆಚ್ಚಿಸಲು ಅನುಕೂಲವಾಗಲಿದೆ ಎಂದರು. ಮಳೆಗಾಲದಲ್ಲಿ ಕೃಷ್ಣಾ ನದಿ ನೀರು ತುಂಬಿ ಹರಿಯುತ್ತಿರುವುದರಿಂದ, ಹೆಸ್ಕಾಂ ಇಲಾಖೆಯವರು 33 ಕೆವ್ಹಿ ವಿದ್ಯುತ್ ಸಂಪರ್ಕ ತಕ್ಷಣ ನೀಡಬೇಕು. ಕೆರೆ ತುಂಬುವ ಯೋಜನೆ ಮುಗಿದ ಕೂಡಲೇ ಇಲ್ಲಿಂದ ನೀರನ್ನು ಎತ್ತಿ ಕೆರೆಗಳಿಗೆ ಹರಿಸಲಾಗುವುದು ಎಂದು ತಿಳಿಸಿದರು.
ನೀರಾವರಿ ಅಧಿಕಾರಿಗಳಾದ ಇಇ ಎಸ್.ಎಸ್.ಕರಿಗಾರ, ಎಇಇ ಕಲ್ಮೇಶ ಕಮಲಾಕರ, ಗ್ರಾ.ಪಂ.ಅಧ್ಯಕ್ಷ ರಾಮಚಂದ್ರ ಕಾಟೆ, ಅನೀಲ ಹಂಜೆ, ಮಹಾವೀರ ಪಾಟೀಲ, ದಶರಥ ಕಾಟೆ, ಅಜೀತ ಖೆಮಲಾಪೂರೆ, ಸತ್ಯಪ್ಪ ಬಿಷ್ಠೆ, ರಮಜಾನ ಮಕಂದಾರ, ಶ್ರೀಕಾಂತ ಮಂಗಸೂಳೆ, ಜಿನ್ನಪ್ಪ ಚಂಪು, ಅರುಣ ಶಿಂದೆ, ಶಾಮ ಕಾಂಬಳೆ, ದೇವಪ್ಪ ಗಾಂಜೆ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 