ತಿರಂಗಾ ಯಾತ್ರೆಗೆ ಶಾಸಕ ಐಹೊಳೆ ಚಾಲನೆ
MLA Aihole launches Tiranga Yatra
ರಾಯಬಾಗ 24: ಪಾಕಿಸ್ತಾನ ವಿರುದ್ಧ ಅಪರೇಷನ್ ಸಿಂಧೂರ ಕಾರ್ಯಾಚರಣೆ ಮಾಡುವುದರ ಮೂಲಕ ಭಾರತ ತನ್ನ ಸೈನ್ಯ ಶಕ್ತಿಯನ್ನು ವಿಶ್ವಕ್ಕೆ ತೋರಿಸಿ ಕೊಟ್ಟಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಶನಿವಾರ ಪಟ್ಟಣದ ಅಂಬಾಭವಾನಿ ಮಂದಿರದಿಂದ ಅಭಾಜಿ ವೃತ್ತದವರೆಗೆ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ, ಭಾರತೀಯ ಹೆಣ್ಣು ಮಕ್ಕಳ ಸಿಂಧೂರ ಅಳಿಸಿದ್ದಕ್ಕೆ ತಕ್ಕ ಪ್ರತೀಕಾರ ಭಾರತೀಯ ಸೈನ್ಯ ಪಾಕಿಸ್ತಾನ ವಿರುದ್ಧ ತೀರಿಸಿಕೊಂಡಿದೆ. ಸೈನಿಕರ ನೈತಿಕ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ನಮ್ಮ ದೇಶವನ್ನು ಸಂರಕ್ಷಿಸುವ ದೇಶದ ಸೈನಿಕರನ್ನು ನಾವು ಸದಾ ಗೌರವಿಸಬೇಕೆಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ವಿವೇಕರಾವ ಪಾಟೀಲ, ಶಿವಶಂಕರ ಸ್ವಾಮೀಜಿ, ವೀರಭದ್ರ ಸ್ವಾಮೀಜಿ, ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ, ಮುಖಂಡರಾದ ಸತೀಶ ಅಪ್ಪಾಜಿಗೋಳ, ಪೃಥ್ವಿರಾಜ ಜಾಧವ, ಭರತೇಶ ಬನವಣೆ, ಮಹೇಶ ಭಾತೆ, ರಾಜು ದೇಶಪಾಂಡೆ, ಎಲ್.ಬಿ.ಚೌಗಲಾ, ವಿ.ಎಸ್.ಪೂಜಾರಿ, ಜಯದೀಪ ದೇಸಾಯಿ, ಶಿವಾನಂದ ಬಂತೆ, ಅಪ್ಪು ಪವಾರ, ಅನೀಲ ಶೆಟ್ಟಿ, ಸದಾಶಿವ ಘೋರೆ್ಡ, ರಾಜಶೇಖರ ಖನದಾಳೆ, ಅಪ್ಪಾಸಾಬ ಬ್ಯಾಕೂಡೆ, ಆನಂದ ಹೊಸಮನಿ ಹಾಗೂ ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾಲೇಜ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 