ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಐಹೊಳೆ ಚಾಲನೆ
MLA Aihole launches road asphalting work
ರಾಯಬಾಗ, 25 : ಮತಕ್ಷೇತ್ರದಲ್ಲಿ ಬಾಕಿ ಇರುವ ಏತ ನೀರಾವರಿ ಯೋಜನೆಗಳನ್ನು ನನ್ನ ಅಧಿಕಾರವಾಧಿಯಲ್ಲಿ ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಡಿ.ಎಮ್ ಐಹೊಳೆ ಹೇಳಿದರು. ಬುಧವಾರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 1 ಕೋಟಿ ರೂ. ಅನುದಾನದಲ್ಲಿ ನಾಗರಾಳ-ಬಿರನಾಳ ರಸ್ತೆ ಡಾಂಬರೀಕರಣ ಹಾಗೂ ನಂದಿಕುರಳಿ ಗ್ರಾಮದಲ್ಲಿ 1 ಕೋಟಿ 25 ಲಕ್ಷ ರೂ. ಅನುದಾನದಲ್ಲಿ ನಂದಿಕುರಳಿ-ನಸಲಾಪೂರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಯಬಾಗ ಮತಕ್ಷೇತ್ರದಲ್ಲಿ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜೊತೆಗೆ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಿ, ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿ ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಲೋಕೋಪಯೋಗಿ ಇಲಾಖೆ ಎಇಇ ಆರಿ್ಬ.ಮನುವಡ್ಡರ, ಎಇ ರಾಜೇಶ ಡಂಗ, ಆರಿ್ಬ.ಶಹಾರೆ, ಭೀಮು ಮುಧೋಳೆ, ಅಪ್ಪಾಸಾಹೇಬ ಕೆಂಗನ್ನವರ, ಬಸಪ್ಪ ಮುಧೋಳೆ, ಸತ್ಯಪ್ಪಾ ದಾವನೆ, ಈರಗೌಡ ಪಾಟೀಲ, ರಾಜು ಚೌಗುಲಾ, ಬಸಲಿಂಗ ಮಗದುಮ್ಮ, ಕುತುಬುದ್ದಿನ ಮುಲ್ಲಾ, ಅಪ್ಪಾಸಾಹೇಬ ಮಾಂಗುರೆ, ಬಾಬು ವಂಜೀರೆ, ಪ್ರಧಾನಿ ಉಪ್ಪಾರ, ದಸ್ತಗಿರ ಮುಲ್ತಾನಿ, ನಾರಾಯಣ ಸಾವಂತ, ಕೃಷ್ಣಾ ದತ್ತವಾಡೆ, ರಾಜು ಸಾವಂತ, ಕೃಷ್ಣಾ ಮೋರೆ, ಅಶೊಕ ದತ್ತವಾಡೆ, ಮಂಜು ಸಂಗೋಟೆ, ನಾರಾಯಣ ಬಿರ್ಜೆ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 