ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಐಹೊಳೆ ಚಾಲನೆ
MLA Aihole launches road asphalting work
ರಾಯಬಾಗ, 25 : ಮತಕ್ಷೇತ್ರದಲ್ಲಿ ಬಾಕಿ ಇರುವ ಏತ ನೀರಾವರಿ ಯೋಜನೆಗಳನ್ನು ನನ್ನ ಅಧಿಕಾರವಾಧಿಯಲ್ಲಿ ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಡಿ.ಎಮ್ ಐಹೊಳೆ ಹೇಳಿದರು. ಬುಧವಾರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 1 ಕೋಟಿ ರೂ. ಅನುದಾನದಲ್ಲಿ ನಾಗರಾಳ-ಬಿರನಾಳ ರಸ್ತೆ ಡಾಂಬರೀಕರಣ ಹಾಗೂ ನಂದಿಕುರಳಿ ಗ್ರಾಮದಲ್ಲಿ 1 ಕೋಟಿ 25 ಲಕ್ಷ ರೂ. ಅನುದಾನದಲ್ಲಿ ನಂದಿಕುರಳಿ-ನಸಲಾಪೂರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಯಬಾಗ ಮತಕ್ಷೇತ್ರದಲ್ಲಿ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜೊತೆಗೆ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಿ, ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿ ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಲೋಕೋಪಯೋಗಿ ಇಲಾಖೆ ಎಇಇ ಆರಿ್ಬ.ಮನುವಡ್ಡರ, ಎಇ ರಾಜೇಶ ಡಂಗ, ಆರಿ್ಬ.ಶಹಾರೆ, ಭೀಮು ಮುಧೋಳೆ, ಅಪ್ಪಾಸಾಹೇಬ ಕೆಂಗನ್ನವರ, ಬಸಪ್ಪ ಮುಧೋಳೆ, ಸತ್ಯಪ್ಪಾ ದಾವನೆ, ಈರಗೌಡ ಪಾಟೀಲ, ರಾಜು ಚೌಗುಲಾ, ಬಸಲಿಂಗ ಮಗದುಮ್ಮ, ಕುತುಬುದ್ದಿನ ಮುಲ್ಲಾ, ಅಪ್ಪಾಸಾಹೇಬ ಮಾಂಗುರೆ, ಬಾಬು ವಂಜೀರೆ, ಪ್ರಧಾನಿ ಉಪ್ಪಾರ, ದಸ್ತಗಿರ ಮುಲ್ತಾನಿ, ನಾರಾಯಣ ಸಾವಂತ, ಕೃಷ್ಣಾ ದತ್ತವಾಡೆ, ರಾಜು ಸಾವಂತ, ಕೃಷ್ಣಾ ಮೋರೆ, ಅಶೊಕ ದತ್ತವಾಡೆ, ಮಂಜು ಸಂಗೋಟೆ, ನಾರಾಯಣ ಬಿರ್ಜೆ ಸೇರಿ ಅನೇಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 