ಶಾಸಕ ಅಶೋಕ ಮನಗೂಳಿ ಹುಟ್ಟುಹಬ್ಬ: ಮಕ್ಕಳಿಗೆ ನೋಟ್ಬುಕ್ ವಿತರಣೆ
MLA Ashok Managuli's birthday: Notebooks distributed to children
ಸಿಂದಗಿ 30: ಶಾಸಕ ಅಶೋಕ ಮನಗೂಳಿ ಅವರು ಕಾಂಗ್ರೆಸ್ ಸರಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟಿಸಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಕಾಂಗ್ರೆಸ್ ಓಬಿಸಿ ರಾಜ್ಯ ಕಾರ್ಯದರ್ಶಿ ಎಂ.ಎ.ಖತೀಬ ಹೇಳಿದರು.
ಪಟ್ಟಣದ ಮುರಿಗೆಮ್ಮ ಸರಕಾರಿ ಪ್ರೌಢಶಾಲೆಯಲ್ಲಿ ಶಾಸಕ ಅಶೋಕ ಮನಗೂಳಿ ಅವರು ಹುಟ್ಟುಹಬ್ಬದ ನಿಮಿತ್ಯ ಭೀಮು ವಾಲಿಕಾರ ಅವರು ಮಕ್ಕಳಿಗೆ ನೋಟ್ಬುಕ್ಕ ವಿತರಣೆ ಮಾಡಿ ಮಾತನಾಡಿದರು.
ಕಾಂಗ್ರೆಸ್ ಬಗರ್ ಹುಕುಂ ಸದಸ್ಯ ಭೀಮು ವಾಲಿಕಾರ ಮಾತನಾಡಿ, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದ ಹಾಗೆ ನಮ್ಮ ಶಾಸಕ ಅಶೋಕ ಮನಗೂಳಿ ಅವರು ಕ್ಷೇತ್ರದ ಜನತೆಗೆ ನೀಡಿದ ವಾಗ್ದಾನದಂತೆ ಪ್ರತಿಯೊಂದು ಹಳ್ಳಿಗಳ ಅಭಿವೃದ್ಧಿಗೆ ಸಹಕಾರಿಯಾಗಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡ ಶಿವನಗೌಡ ಬಿರಾದಾರ ಮಾತನಾಡಿ, ದಿ.ಮಾಜಿ ಸಚಿವ ಎಂ.ಸಿ.ಮನಗೂಳಿಯವರ ಕಂಡ ಶಾಶ್ವತ ಯೋಜನೆಗಳನ್ನು ಜಾರಿಗೆ ತಂದು ಜನರ ಮೆಚ್ಚುಗೆ ಗಳಿಸಿದ್ದಾರೆ ಎಂದು ಹೇಳಿದರು.
ಯೋಜನಾ ಪ್ರಾಧಿಕಾರದ ಸದಸ್ಯ ಅಂಬ್ರೀಶ ಚೌಗಲೆ, ಚಂದ್ರು ಕಾಂಬಳೆ, ವಿಜು ತಾಳಿಕೋಟಿ, ರಮೇಶ ನಡುವಿನಕೇರಿ, ನೀಕೀಲ ಬಳ್ಳಾರಿ, ಸಚೀನ ಕುಂಬರ, ಗುರು ಬಳ್ಳಾರಿ, ಅನಂತ ನಿಂಬಾಳಕರ, ವಿಜು ಬೂದಿಹಾಳ, ಅಂಬಿ ಸಾಗರ, ವಿನಾಯಕ, ಸಂಗು ಸೆರಿದಂತೆ ಅನೇಕರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 