ಬ್ಯಾಡಗಿ ಬರಗಾಲ ಪೀಡಿತ ಎಂದು ಘೋಷಿಸಲು ಶಾಸಕ ಬಳ್ಳಾರಿ ಒತ್ತಾಯ
ಬೆಳಗಾವಿ ಅಧಿವೇಶನದಲ್ಲಿ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡುತ್ತಿರುವುದು.
ಲೋಕದರ್ಶನ ವರದಿ
ಬ್ಯಾಡಗಿ 16:- ಬ್ಯಾಡಗಿ ತಾಲೂಕನ್ನು ಬರಗಾಲ ಪೀಡಿತಎಂದು ಶೀಘ್ರವಾಗಿ ಘೋಷಿಸಬೇಕೆಂದು ಬ್ಯಾಡಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಬೆಳಗಾವಿ ಅಧಿವೇಶನದಲ್ಲಿ ಸರಕಾರಕ್ಕೆ ಒತ್ತಾಯಿಸಿದರು.
ದಿನಾಂಕ: 16 ರಂದು ಬೆಳಗಾವಿ ಅಧಿವೇಶನದಲ್ಲಿ ನಡೆದ ಪ್ರಶ್ನೋತ್ತಾರ ವೇಳೆಯಲ್ಲಿ ಪಕ್ಕದತಾಲೂಕ ಹಿರೇಕೆರೂರ ತಾಲೂಕು ಅರೆಮಲೆನಾಡು ಪ್ರದೇಶದ ವ್ಯಾಪ್ತಿಯಲ್ಲಿ ಬರುತ್ತಿದ್ದರೂ ಸಹ ಅದನ್ನು ಬರಗಾಲ ಪ್ರದೇಶವೆಂದು ಘೋಷಿಸಿ, ಪಕ್ಕದಲ್ಲಿರುವ ಅತೀ ಹಿಂದುಳಿದ ಬೆಂಗಾಡು ಪ್ರದೇಶವಾಗಿರುವ ಬ್ಯಾಡಗಿ ತಾಲೂಕನ್ನು ಏಕೆ ಬರಗಾಲ ಪೀಡಿತ ಅಂತಾ ಏಕೆ ಘೋಷಣೆ ಮಾಡಿಲ್ಲ. ಈ ತಾರತಮ್ಯಕ್ಕೆ ಕಾರಣವೇನು ? ಇದಕ್ಕೆ ಕೃಷಿ ಸಚಿವರು ಕಂದಾಯ ಸಚಿವರು ತಕ್ಷಣಕ್ರಮಕೈಗೊಂಡು ಬ್ಯಾಡಗಿ ತಾಲೂಕನ್ನು ಬರಗಾಲ ಪೀಡಿತವೆಂದು ಘೋಷಣೆ ಮಾಡಬೇಕು.
ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಜಿಲ್ಲಾಧಿಕಾರಿಗಳ ಅನುಮತಿ ತೆಗೆದುಕೊಳ್ಳಬೇಕಾದ ಪರಿಸ್ಥಿತಿಯಲ್ಲಿ ಎಲ್ಲಾ ಜವಾಬ್ದಾರಿಗಳನ್ನು ಜಿಲ್ಲಾಧಿಕಾರಿಗಳಿಗೆ ವಹಿಸಿದರೆ ಕೆಲಸವಾಗುವುದು ಹೇಗೆ ? ಆದ್ದರಿಂದಾಟಾಸ್ಕ ಪೋರ್ಸ ಸಮಿತಿಯವರ ವರದಿಯ ಪ್ರಕಾರಕುಡಿಯುವ ನೀರಿಗೆ ಕೊಳವೆಭಾವಿ ತೋಡುವಕ್ರಮ ಕೈಗೊಳ್ಳಬೇಕು ತಕ್ಷಣ ಬರಗಾಲ ಕಾಮಗಾರಿಗಳನ್ನು ಪ್ರಾರಂಭಿಸಿ ಜನರಿಗೆಉದ್ಯೋಗ, ಕುಡಿಯುವ ನೀರಿಗೆ ವ್ಯವಸ್ಥೆ ಮಾಡಬೇಕೆಂದು ಶಾಸಕರು ಸರಕಾರಕ್ಕೆ ಒತ್ತಾಯಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 