ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಚಾಲನೆ
MLA DM Aihole launches road improvement work
ರಾಯಬಾಗ 14 : ಮತಕ್ಷೇತ್ರದಲ್ಲಿರುವ ತೋಟದ ರಸ್ತೆ ಸುಧಾರಣೆ ಹಾಗೂ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದರ ಮೂಲಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಶನಿವಾರ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಪಂಚಾಯತ ರಾಜ್ ಇಲಾಖೆಯಿಂದ ವಿವಿಧ ಯೋಜನೆಯಡಿ ಮಂಜೂರಾದ ಅನುದಾನದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಚಿಂಚಲಿ ಮುಖ್ಯ ರಸ್ತೆಯಿಂದ ಮಾಂಗ ಮನೆಯ ವರೆಗೆ ಹಾಗೂ ಡೋರ ಜನಾಂಗದ ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣ, 30 ಲಕ್ಷ ರೂ.ವೆಚ್ಚದಲ್ಲಿ ಉಪ್ಪಾರ ಕೋಡಿ ರಸ್ತೆಯಿಂದ ಚಿಂಚಲಿ-ಬೆಕ್ಕೇರಿ ಕೂಡು ರಸ್ತೆ ಸುಧಾರಣೆ, 5 ಲಕ್ಷ ರೂ.ವೆಚ್ಚದಲ್ಲಿ ಧರಣ ರಸ್ತೆಯಿಂದ ಹಳಚಪಟ್ಟಿ ರಸ್ತೆ ವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಭಾಗದ ರಸ್ತೆ ಸುಧಾರಣೆಯಿಂದ ಸಾರಿಗೆ ಸಂಚಾರ ಸುಗಮವಾಗುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುವುದು ಎಂದರು.
ಸದಾಶಿವ ಘೋರೆ್ಡ, ಅಂಕುಶ ಜಾಧವ, ಅನೀಲ ಮೈಶಾಳೆ, ಕಲ್ಲಪ್ಪ ಮೈಶಾಳೆ, ಪ್ರಭು ಮೈಶಾಳೆ, ಸಂಜು ಮೈಶಾಳೆ, ಕದ್ದು ಜಾಧವ, ಪೊಪಟ ಜಾಧವ, ಗಂಗಪ್ಪ ಪುಜೇರಿ, ರಾಮು ಪುಜೇರಿ, ಲಕ್ಷ್ಮಣ ಕೋಳಿ, ರಾಮಾ ಕೋಳಿ, ಗಣಪತಿ ಕೋಳಿ, ಪ್ರಕಾಶ ಜಾಧವ, ದೀಪಕ ಜಾಧವ, ಅಜಿತ ಜಾಧವ, ಲಕ್ಷ್ಮಣ ತುಳಸಗೇರಿ, ರಾವಸಾಬ ಜಾಧವ, ಮಲ್ಲು ಪಾಟೀಲ, ಮಹಾವೀರ ಮಾಂಜರೆ, ರಾಜು ಪೋಳ ಸೇರಿ ಅನೇಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 