ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಚಾಲನೆ
MLA DM Aihole launches road improvement work
ರಾಯಬಾಗ 14 : ಮತಕ್ಷೇತ್ರದಲ್ಲಿರುವ ತೋಟದ ರಸ್ತೆ ಸುಧಾರಣೆ ಹಾಗೂ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದರ ಮೂಲಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಶನಿವಾರ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಪಂಚಾಯತ ರಾಜ್ ಇಲಾಖೆಯಿಂದ ವಿವಿಧ ಯೋಜನೆಯಡಿ ಮಂಜೂರಾದ ಅನುದಾನದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಚಿಂಚಲಿ ಮುಖ್ಯ ರಸ್ತೆಯಿಂದ ಮಾಂಗ ಮನೆಯ ವರೆಗೆ ಹಾಗೂ ಡೋರ ಜನಾಂಗದ ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣ, 30 ಲಕ್ಷ ರೂ.ವೆಚ್ಚದಲ್ಲಿ ಉಪ್ಪಾರ ಕೋಡಿ ರಸ್ತೆಯಿಂದ ಚಿಂಚಲಿ-ಬೆಕ್ಕೇರಿ ಕೂಡು ರಸ್ತೆ ಸುಧಾರಣೆ, 5 ಲಕ್ಷ ರೂ.ವೆಚ್ಚದಲ್ಲಿ ಧರಣ ರಸ್ತೆಯಿಂದ ಹಳಚಪಟ್ಟಿ ರಸ್ತೆ ವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಭಾಗದ ರಸ್ತೆ ಸುಧಾರಣೆಯಿಂದ ಸಾರಿಗೆ ಸಂಚಾರ ಸುಗಮವಾಗುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುವುದು ಎಂದರು.
ಸದಾಶಿವ ಘೋರೆ್ಡ, ಅಂಕುಶ ಜಾಧವ, ಅನೀಲ ಮೈಶಾಳೆ, ಕಲ್ಲಪ್ಪ ಮೈಶಾಳೆ, ಪ್ರಭು ಮೈಶಾಳೆ, ಸಂಜು ಮೈಶಾಳೆ, ಕದ್ದು ಜಾಧವ, ಪೊಪಟ ಜಾಧವ, ಗಂಗಪ್ಪ ಪುಜೇರಿ, ರಾಮು ಪುಜೇರಿ, ಲಕ್ಷ್ಮಣ ಕೋಳಿ, ರಾಮಾ ಕೋಳಿ, ಗಣಪತಿ ಕೋಳಿ, ಪ್ರಕಾಶ ಜಾಧವ, ದೀಪಕ ಜಾಧವ, ಅಜಿತ ಜಾಧವ, ಲಕ್ಷ್ಮಣ ತುಳಸಗೇರಿ, ರಾವಸಾಬ ಜಾಧವ, ಮಲ್ಲು ಪಾಟೀಲ, ಮಹಾವೀರ ಮಾಂಜರೆ, ರಾಜು ಪೋಳ ಸೇರಿ ಅನೇಕರು ಇದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 