ರಸ್ತೆ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಚಾಲನೆ
MLA DM Aihole launches road work
ರಾಯಬಾಗ, 20 ; ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಯಿಂದ ರೈತರಿಗೆ, ಪ್ರಯಾಣಿಕರಿಗೆ ತ್ವರಿತವಾಗಿ ಸಾಗಲು ಮತ್ತು ಸುಗಮ ಸಂಚಾರಕ್ಕೆ ಅನುಕೂಲವಾಗುವುದು ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಮಂಗಳವಾರ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ತಾಲೂಕಿನ ಜಲಾಲಪೂರ ಗ್ರಾಮದಲ್ಲಿ 60 ಲಕ್ಷ ರೂ. ಅನುದಾನದಲ್ಲಿ ಜಲಾಲಪೂರ-ರಾಯಬಾಗ ರಸ್ತೆ ಡಾಂಬರೀಕರಣ ಹಾಗೂ ಚಿಂಚಲಿ ರೈಲ್ವೆ ಸ್ಟೇಷನ್ ಹತ್ತಿರ 1 ಕೋಟಿ ರೂ. ಅನುದಾನದಲ್ಲಿ ರೈಲ್ವೆ ಸ್ಟೇಷನ್ದಿಂದ ರೈಲ್ವೆ ಗೇಟ್ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮತಕ್ಷೇತ್ರದ ಎಲ್ಲ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು. ಗುತ್ತಿಗೆದಾರರು ಗುಣಮಟ್ಟದಿಂದ ರಸ್ತೆ ಕಾಮಗಾರಿ ಮಾಡಬೇಕೆಂದರು.
ಎಇಇ ಆರ್.ಬಿ.ಮನವಡ್ಡರ, ಸದಾಶಿವ ಘೋರೆ್ಡ, ರಾಜು ಜಾಧವ, ಮೌಲಾನಾ ನದಾಫ, ಅಂಕುಶ ಜಾಧವ, ಸುಭಾಷ ಕೋರೆ, ನಾಮದೇವ ಕಾಂಬಳೆ, ಬಸು ಅವ್ವನ್ನವರ, ರಾಜು ಮುರಚಟ್ಟಿ, ರಮೇಶ ಹಾರೂಗೇರಿ, ಲಕ್ಷ್ಮಣ ತುಳಸಿಗೇರಿ, ಮಲ್ಲು ಜಗದಾಳೆ, ಕಿರಣ ಖನದಾಳೆ, ವಿನಾಯಕ ಪವಾರ, ಕುಮಾರ ಖೋತ, ಅಜೀತ ಈರಗಾರ, ಫಿರೋಜ ಮಕಾಂದಾರ, ಮಹೇಂದ್ರ ಗಾಣಿಗೇರ, ರಾಜು ಪೋಳ, ಅನೀಲ ಮೈಶಾಳೆ, ಪ್ರಕಾಶ ತೇರದಾಳ, ಮಲ್ಲಪ್ಪ ಕಮತೆ ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು 