14ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ್ ಅವರಿಗೆ ಸನ್ಮಾನ
MLA Doddanagouda Patil felicitated at the 14th District Kannada Literary Conference
ಕುಷ್ಟಗಿ 05: ತಾಲೂಕಿನ ಕೊರಡಕೇರಿ ಗ್ರಾಮದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ್ ಅವರನ್ನು ಗ್ರಹ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಜಿಲ್ಲಾ ಕಸಾಪ ಹಾಗೂ ತಾಲೂಕು ಕಸಾಪ ಪದಾಧಿಕಾರಿಗಳು ಭೇಟಿ ನೀಡಿ ಮುದೇನೂರುನಲ್ಲಿ ನಡೆಯುವ 14ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಶಾಸಕ ದೊಡ್ಡನಗೌಡ ಪಾಟೀಲ್ ಅವರನ್ನು ಸನ್ಮಾನಿಸಿ ಗೌರವಿಸಿ ಸಮ್ಮೇಳನ ಕುರಿತು ಚರ್ಚೆ ನಡೆಸಿದರು. ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಂತೋಷದಿಂದ ಒಪ್ಪಿಕೊಂಡು ಕುಷ್ಟಗಿ ತಾಲೂಕಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿರುವದು ಸಂತಸದ ಸಂಗತಿಯಾಗಿದೆ ಎಂದ ಅವರು ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಸಮ್ಮೇಳನ ಆಯೋಜನೆ ಮಾಡಬೇಕು ಹಾಗೂ ಇಂದಿನಿಂದಲೆ ಸಮ್ಮೇಳನದ ಎಲ್ಲಾ ಕಾರ್ಯಗಳಿಗೆ ಮುಂದಾಗಬೇಕು ಎಂದು ತಿಳಿಸಿದರು ಈ ಸಮ್ಮೇಳನ ಯಶಸ್ವಿಗೆ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷಶರಣೆಗೌಡ ಪೊಲೀಸ್ ಪಾಟೀಲ, ಜಿಲ್ಲಾ ಕೋಶಾದ್ಯಕ್ಷ ರಮೇಶ ಕುಲಕರ್ಣಿ, ಕುಷ್ಟಗಿ ತಾಲೂಕು ಕಸಾಪ ಅಧ್ಯಕ್ಷ ಲೆಂಕಪ್ಪ ವಾಲಿಕಾರ, ಕಾರ್ಯದರ್ಶಿ ಶರಣಪ್ಪ ಲೈನದ, ಮಾಜಿ ಕಸಾಪ ಅಧ್ಯಕ್ಷರಾದ, ಹನಮೇಶ ಗುಮಗೇರಿ, ರವೀಂದ್ರ ಬಾಕಳೆ, ಚಂದಪ್ಪ ಹಕ್ಕಿ, ಜಿಲ್ಲಾ ಕಸಾಪ ಪ್ರತಿನಿಧಿ ಎಸ್ ಜಿ ಕಡೆಮನಿ, ಪರಶಿವಮೂರ್ತಿ ದೋಟಿಹಾಳ, ನಾಗರಾಜ ಬಡಿಗೇರ ರಾಜಕುಮಾರ ನಾಯಕ, ಶ್ರೀನಿವಾಸ ಕಂಟ್ಲಿ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 