ಮೊಬೈಲ್ ಫೀವರ್ ಕ್ಲಿನಿಕ್ ಬಸ್ಗೆ ಶಾಸಕ ಜಿ.ಬಿ ಜ್ಯೋತಿಗಣೇಶ್ ಚಾಲನೆ
ತುಮಕೂರು, ಮೇ 18,ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಸಾರ್ವಜನಿಕರ ಉಪಯೋಗಕ್ಕಾಗಿ ತುಮಕೂರು ಕೆಎಸ್ಸಾರ್ಟಿಸಿ ನಿರ್ಮಿಸಿರುವ ಮೊಬೈಲ್ ಫೀವರ್ ಕ್ಲಿನಿಕ್ ಬಸ್ಗೆ ಶಾಸಕ ಜಿ.ಬಿ ಜ್ಯೋತಿಗಣೇಶ್ ಚಾಲನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಕರಾರಸಾ ನಿಗಮ ವತಿಯಿಂದ ಕೋವಿಡ್-19 ತಪಾಸಣೆ ಮಾಡಿಸಿಕೊಳ್ಳಲು ಬಸ್ಸನ್ನು ಮಾರ್ಪಾಡು ಮಾಡಿ, ಮೋಬೈಲ್ ಫೀವರ್ ಕ್ಲಿನಿಕ್ ತೆರೆಯಲಾಗಿದೆ. ನಗರ ಮತ್ತು ಗ್ರಾಮೀಣ ಭಾಗದಿಂದ ತಪಾಸಣೆಗಾಗಿ ಆಸ್ಪತ್ರೆಗಳಿಗೆ ಬರುವ ರೋಗಿಗಳ ಅನವಶ್ಯಕ ಓಡಾಟವನ್ನು ತಪ್ಪಿಸಬಹುದು. ಅವಶ್ಯಕತೆ ಇರುವ ಕಡೆ ಮೊಬೈಲ್ ಫೀವರ್ ಕ್ಲಿನಿಕ್ ಬಸ್ನಲ್ಲಿಯೇ ಗಂಟಲು ದ್ರವ ಮಾದರಿಯನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಅವಶ್ಯಕತೆ ಇರುವ ಕಡೆ ರ್ಯಾಂಡಮ್ ಆಗಿ ಪರೀಕ್ಷೆ ಮಾಡಲು ಜನರ ಗಂಟಲು ದ್ರವ ಮಾದರಿನ್ನು ಪಡೆಯಬಹುದು. ಅಲ್ಲದೇ ಸಾರ್ವಜನಿಕರಿಗೆ ವೈದ್ಯಕೀಯ ಪರೀಕ್ಷೆಯನ್ನು ಮಾಡಲು ಸಹ ಇದು ಉಪಯೋಗವಾಗುತ್ತದೆ. ಸಾರ್ವಜನಿಕರು ಇದರ ಉಪಯೋಗ ಪಡೆದು ಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ನಂತರ ಡಿ.ಎಚ್.ಓ ಡಾ. ನಾಗೇಂದ್ರಪ್ಪ ಮಾತನಾಡಿ, ಜನಸಂದಣಿ ಹೆಚ್ಚಿರುವ ಸ್ಥಳಕ್ಕೆ ಮೊಬೈಲ್ ಫೀವರ್ ಕ್ಲಿನಿಕ್ ಬಸ್ ತೆಗೆದುಕೊಂಡು ಹೋಗಿ ಅವಶ್ಯಕವಿರುವವರ ಗಂಟಲು ದ್ರಾವವನ್ನು ಪರೀಕ್ಷೆ ಮಾಡಲು ವ್ಯಸ್ಥೆಯನ್ನು ಮಾಡಿದ್ದು, ಆರೋಗ್ಯ ಇಲಾಖೆ ವತಿಯಿಂದ ಈಗಾಗಲೇ ಬಸ್ ಕಾರ್ಯನಿರ್ವಹಿಸುತ್ತಿತ್ತು. ಅದರ ಜೊತೆಗೆ ಕೆಎಸ್ಸಾರ್ಟಿಸಿ ವತಿಯಿಂದ ಒಂದು ಬಸ್ ಕಾರ್ಯನಿರ್ವಹಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವೀರಭದ್ರಯ್ಯ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 