ರಸ್ತೆ ಕಾಮಗಾರಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ
MLA Ganesh Hukkeri drive for road works
ಲೋಕದರ್ಶನ ವರದಿ
ಮಾಂಜರಿ 25: ಚಿಕ್ಕೋಡಿ ಸದಲಗ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಡಗೋಲ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 1.30 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.
ಅವರು ಬುಧವಾರ ರಂದು ಸಮೀಪದ ವಡಗೋಲ ಗ್ರಾಮದ ಬೀರಸಿದ್ದೇಶ್ವರ ದೇವಸ್ಥಾನದ ಹತ್ತಿರ ಸೋಮವಾರ ಸಮುದಾಯ ಭವನ ನಿರ್ಮಾಣ ಮತ್ತು ಮಲಿಕವಾಡ-ಮುತ್ತಲಕೋಡಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಬೀರಸಿದ್ದೇಶ್ವರ ಜಾಗೃತ ದೇವಸ್ಥಾನವಾಗಿದ್ದು ಸುತ್ತ ಮುತ್ತಲಿನ ಗ್ರಾಮಗಳ ನೂರಾರು ಭಕ್ತರು ಆಗಮಿಸುತ್ತಾರೆ. ಭಕ್ತರ ಅನುಕೂಲಕ್ಕಾಗಿ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲು ಕಮೀಟಿಯವರು ವಿನಂತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ 1 ಕೋಟಿ ರೂ. ಅಂದಾಜು ಮೊತ್ತದ ಕಾಮಗಾರಿಗೆ 1ನೇ ಕಂತಾಗಿ 50 ಲಕ್ಷರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಮಲಿಕವಾಡದಿಂದ ಮುತ್ತಲಕೋಡಿವರೆಗೆ ರಸ್ತೆ ಹಾಳಾಗಿದ್ದು ಭಕ್ತರಿಗೆ ದೇವಸ್ಥಾನಕ್ಕೆ ಹೋಗಿ ಬರಲು ಹಾಗೂ ಸಾರ್ವಜನಿಕರಿಗೆ ಇತರೆ ಕೆಲಸ ಕಾರ್ಯಗಳಿಗೆ ಸಂಚರಿಸಲು ಅನುಕೂಲವಾಗುವ ದೃಷ್ಟಿಯಿಂದ ಮಲಿಕವಾಡ ಶರ್ಯತ್ತು ರಸ್ತೆಯಿಂದ ವಡಗೋಲ ರಾಯಣ್ಣ ಸರ್ಕಲ್ ಮುಖಾಂತರ ನಣದಿ-ನೇಜ ರಸ್ತೆಗೆ ಕೂಡುವ 2.6 ಕಿಮೀ ಉದ್ದದ ರಸ್ತೆ ಸುಧಾರಣೆಗೆ 80 ಲಕ್ಷ ರೂ. ಮಂಜೂರು ಮಾಡಲಾಗಿದೆ. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ದೇವಸ್ಥಾನ ಕಮೀಟಿ ಅಧ್ಯಕ್ಷ ಮಲ್ಲಪ್ಪ ವಾಳಕೆ, ರಾಜು ಗುಂಡಕಲ್ಲೆ, ಅರುಣ ದೇಸಾಯಿ, ಸಂತೋಷ ನವಲೆ, ಸತೀಶ ಪಾಟೀಲ, ಪೀರಗೌಡ ಪಾಟೀಲ, ರವಿ ಗೋಸಾವಿ, ರಾಮಾ ಮಾರಾಪುರೆ, ಅಶೋಕ ಭಿವಷೆ, ರವಿ ಭತ್ತೆ, ಮಲಿಕವಾಡ ಗ್ರಾಮದ ಬಾಳು ಪಾಟೀಲ, ಸಂಬಾಜಿ ಪಾಟೀಲ, ಅಣ್ಣಾಸಾಹೇಬ ಇಂಗಳೆ, ಉಮೇಶ ಪಾಟೀಲ, ಅಪ್ಪು ಸುಟ್ಟಟ್ಟಿ, ಶಜಾಹಾನ ಜಮಾದಾರ, ಶಂಕರ ಭಾಗಾಯಿ, ಸುಭಾಷ ಕುರಬೆಟ್ಟೆ, ಮಹಾದೇವ ಖೋತ, ಚಂದು ಭತ್ತೆ ಮುಂತಾದವರು ಉಪಸ್ಥಿತರಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 