ತಾ.ಪಂ.ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಜೆ.ಎನ್.ಗಣೇಶ
MLA J.N. Ganesh inaugurated the new building of the T.P.
ತಾ.ಪಂ.ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಜೆ.ಎನ್.ಗಣೇಶ
ಕಂಪ್ಲಿ 09: ತಾಲೂಕಿನ ನಂ.10 ಮುದ್ದಾಪುರದ ಹೊಸಪೇಟೆ ಬೈಪಾಸ್ ರಸ್ತೆಯ ಮಿನಿವಿಧಾನಸೌಧ ಬಳಿಯಲ್ಲಿ ನಿರ್ಮಾಣಗೊಂಡ ಸುಸಜ್ಜಿತ ತಾಲೂಕು ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕ ಜೆ.ಎನ್.ಗಣೇಶ ಶನಿವಾರ ಉದ್ಘಾಟಿಸಿದರು.ನಂತರ ವೇದಿಕೆ ಸಮಾರಂಭದಲ್ಲಿ ಶಾಸಕ ಗಣೇಶ ಮಾತನಾಡಿ, ಕಂಪ್ಲಿ ತಾಲೂಕು ಕೇಂದ್ರವಾದ ಮೇಲೆ ತಾಲೂಕು ಪಂಚಾಯಿತಿ ಕಛೇರಿಯನ್ನು ನಗರದ ನೀರಾವರಿ ಇಲಾಖೆ ಬಳಿಯಲ್ಲಿರುವ ಕಟ್ಟಡದಲ್ಲಿ ಪ್ರಾರಂಭಿಸಲಾಗಿತ್ತು. ಆದರೆ, ಈಗ ಕೋಟ್ಯಾಂತರ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಿದ್ದು, ಇದರಲ್ಲಿ ಇನ್ನು ಮುಂದೆ ತಾಪಾಂಯ ಕಾರ್ಯವೈಕರಿಗಳು ನಡೆಯಲಿವೆ. ಪ್ರತಿಯೊಂದು ಯೋಜನೆಗಳ ತಾಪಂ ಮಟ್ಟದಿಂದ ಗ್ರಾಪಂಗೆ ಬರುತ್ತವೆ. ಅಧಿಕಾರಿಗಳ ಸಹಕಾರದಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಇನ್ನೂ ಕೆಲ ತಿಂಗಳಲ್ಲಿ ಕಂಪ್ಲಿ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿ ಸಂಪೂರ್ಣವಾಗಿ ಪೂರ್ಣಗೊಳ್ಳಲಿವೆ ಎಂದರು. ಈ ವೇಳೆ ಜಿಲ್ಲಾ ಮಟ್ಟದ ಸರಸ್ ಮೇಳ, ಉತ್ಪನ್ನಗಳ ವಸ್ತು ಪ್ರದರ್ಶನ, ಸಂಜೀವಿನಿ ಮಾಸಿಕ ಸಂತೆ ಸೇರಿದಂತೆ ವಿವಿಧ ವಸ್ತು ಪ್ರದರ್ಶನಗಳಿಗೆ ಚಾಲನೆ ನೀಡುವ ಮೂಲಕ ವೀಕ್ಷಿಸಿದರು.ಈ ಸಂದರ್ಭದಲ್ಲಿ ಜಿಪಂ ಯೋಜನಾಧಿಕಾರಿ ವಾಗೀಶ್, ತಾಪಂ ಆಡಳಿತಾಧಿಕಾರಿ ಪರಿಮಳ, ಇಒ ಆರ್.ಕೆ.ಶ್ರೀಕುಮಾರ, ಸಹಾಯಕ ನಿರ್ದೇಶಕ ಮಲ್ಲನಗೌಡ ಕೆ.ಎಸ್, ಗ್ರಾಪಂ ಅಧ್ಯಕ್ಷೆ ಸೋಮೇಶ್ವರಿ, ಸದಸ್ಯರು, ಎಇಇ ಹರೀಶ್, ಪುರಸಭೆ ಸದಸ್ಯ ಸಿ.ಆರ್.ಹನುಮಂತ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಕರ್ನಾಟಕ ರಾಜ್ಯ ದಿಶಾ ಸಮಿತಿ ಸದಸ್ಯ ಎ.ಸಿ.ದಾನಪ್ಪ, ಕೃಷಿ ಅಧಿಕಾರಿಗಳಾದ ಸೋಮಶೇಖರ, ಶ್ರಿಧರ್, ಮುಖಂಡರಾದ ಕೆ.ಷಣ್ಮುಕಪ್ಪ, ಜಗದೀಶಗೌಡ, ಬಿ.ನಾರಾಯಣಪ್ಪ, ರಘುರಾಮ್ ಸೇರಿದಂತೆ ಜನಪ್ರತಿನಿಧಿಗಳು, ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು, ತಾಪಂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 