ರಸ್ತೆ ಕಾಮಗಾರಿಗಳಿಗೆ ಶಾಸಕ ಜೆ.ಎನ್.ಗಣೇಶ ಶಂಕುಸ್ಥಾಪನೆ
MLA J.N. Ganesh lays foundation stone for road works
ಕಂಪ್ಲಿ 11: ಚುನಾವಣಾ ಪೂರ್ವದಲ್ಲಿ ನೀಡಿದಂತಹ ಭರವಸೆಯಂತೆ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದು, ಇನ್ನುಳಿದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು. ತಾಲೂಕಿನ ಮೆಟ್ರಿ ಗ್ರಾಮದಲ್ಲಿ 2024-25ನೇ ಸಾಲಿನ 5054ರ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಸುಮಾರು 50 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿ, ಜನರ ಆಶೀರ್ವಾದಿಂದ ಕ್ಷೇತ್ರದಲ್ಲಿ ಶಾಸಕನಾಗಿ ಕೆಲಸ ಮಾಡಲಾಗುತ್ತಿದೆ. ಕಂಪ್ಲಿ ತಾಲೂಕು ಸೇರಿದಂತೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಇಲಾಖೆಯಿಂದ ಸಾಕಷ್ಟು ಅನುದಾನ ತಂದು ಅಭಿವೃದ್ಧಿಗೊಳಿಸುವ ಮೂಲಕ ಮೂಲಸೌಕರ್ಯ ಒದಗಿಸಲಾಗುತ್ತಿದೆ. ಈಗಾಗಲೇ ಮುಕ್ಕಾಲು ಭಾಗದಷ್ಟು ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಆದರೆ, ರೈತರು ಅಭಿವೃದ್ಧಿಗೊಂಡ ರಸ್ತೆ ಮೇಲೆ ಟ್ರ್ಯಾಕ್ಟರ್ ವ್ಹೀಲ್ ಹಾಕುವುದರಿಂದ ರಸ್ತೆಗಳು ಹಾಳಾಗುವಂತಾಗಿದೆ. ಸಾಕಷ್ಟು ಬಾರಿ ಮನವಿ ಮಾಡಿದರೂ, ರೈತರು ವ್ಹೀಲ್ ಹಾಕುವುದು ಬಿಡುತ್ತಿಲ್ಲ. ರಸ್ತೆಗಳು ಉಳಿಯಬೇಕಾದರೆ, ವ್ಹೀಲ್ ಹಾಕುವುದನ್ನು ರೈತರು ಬಿಡಬೇಕು ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಗ್ರಾಪಂ ಅಧ್ಯಕ್ಷೆ ನಾಗಮ್ಮ, ಸದಸ್ಯರಾದ ನೆಣಕಿ ಗೀರೀಶ್, ಹೆಚ್.ಕುಮಾರಸ್ವಾಮಿ, ಮುಖಂಡರಾದ ಹೊನ್ನಳ್ಳಿ ಗಂಗಾಧರಗೌಡ, ಹೊಸಕೋಟೆ ಜಗದೀಶ, ತಿಪ್ಪೇಶಿ, ಕನಕಪ್ಪ, ತಿಮ್ಮಯ್ಯ, ಸ್ವಾಮಿ, ಶೇಖರ್ಪ, ಶಂಕ್ರ್ಪ, ಮಲ್ಲಿ, ಮೆಟ್ರಿ ಶಿವಪುತ್ರ್ಪ ಹೊನ್ನಳ್ಳಿ, ನಾಗರಾಜ ಸೇರಿದಂತೆ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಇದ್ದರು. ಚಿಕ್ಕಜಾಯಿಗನೂರು: ಹಂಪಾದೇವನಹಳ್ಳಿ ಗ್ರಾಪಂಯ ಚಿಕ್ಕಜಾಯಿಗನೂರು ಗ್ರಾಮದಲ್ಲಿ 2024-25ನೇ ಸಾಲಿನ ಅಪ್ಪೆಂಡಿಕ್ಸ್ ಯೋಜನೆಯಡಿ ಸುಮಾರು 100 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ್ ಇವರು ಅಡಿಗಲ್ಲು ಪೂಜೆ ಸಲ್ಲಿಸಿದರು. ಹಾಗೂ ಇಲ್ಲಿನ ಹಿರೇಜಾಯಿಗನೂರು ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಕೆಕೆಆರ್ಡಿಬಿ ಯೋಜನೆಯಡಿ ಸುಮಾರು 50 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಗಣೇಶ ಚಾಲನೆ ನೀಡಿದರು. ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 