ಶಾಸಕ ಕೃಷ್ಣನಾಯಕ ಜನ್ಮದಿನ : ಬೃಹತ್ ಉದ್ಯೋಗ ಮೇಳ ಜೂ.2
MLA Krishnanayak's birthday: Huge job fair June 2
ಲೋಕದರ್ಶನ ವರದಿ
ಹೂವಿನಹಡಗಲಿ 20 : ಶಾಸಕ ಕೃಷ್ಣನಾಯ್ಕ ಅವರ ಜನ್ಮದಿನ ಹಿನ್ನೆಲೆಯಲ್ಲಿ ಜೂನ್ 2ರಂದು ಶಾಸಕರ ಆಯೋಜನೆಯಲ್ಲಿ ಪಟ್ಟಣದ ಜಿಬಿಆರ್. ಕಾಲೇಜಿನಲ್ಲಿ ಯುವಕ,ಯುವತಿಯರು ಮತ್ತು ಮಹಿಳೆಯರಿಗಾಗಿ ಬೃಹತ್ ಉದ್ಯೋಗ ಮೇಳ-26 ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಕೃಷ್ಣನಾಯಕ ಹೇಳಿದರು.ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿ ಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮತಕ್ಷೇತ್ರದ ಉದ್ಯೋಗಾವಕಾಶ ವಂಚಿತ ಯುವಕ ಯುವತಿಯರಿಗೆ ಸಹಾಯ ಮಾಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ನಮ್ಮ ಭಾಗದ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಮಹಿಳಾ ಮತ್ತು ಯುವ ಉದ್ಯಮಿ ಕಾರ್ಯಕ್ರಮದಡಿ ಮಹಿಳಾ ಸಬಲೀಕರಣ, ಯುವ ಉದ್ಯೋಗ ಮತ್ತು ಸ್ವಯಂ ಉದ್ಯೋಗ ತರಬೇತಿಗೆ ಇಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು.
ಕೌಶಲ್ಯಾಭಿವೃದ್ಧಿ, ಸ್ಟಾರ್ಟ್ ಅಪ್ ಹಾಗೂ ಸಣ್ಣ ಉದ್ಯಮಗಳ ಸ್ಥಾಪನೆಗೆ ಉತ್ತೇಜನ ನೀಡಲು 100ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಭಾಗವಹಿಸುತ್ತಿವೆ ಎಂದರು.ಅಂದು ಮಹಿಳೆಯರಿಗಾಗಿ ಪಟ್ಟಣದ ಎಂ.ಪಿ.ರುದ್ರಾಂಬ ಪ್ರಕಾಶ ಪದವಿ ಕಾಲೇಜಿನಲ್ಲಿ ವಿಶೇಷವಾಗಿ ಮಹಿಳೆಯರಿಗೆ ಗೃಹ ಹಾಗೂ ಗುಡಿ ಕೈಗಾರಿಕೆಗಳ ಮೂಲಕ ತಯಾರಿಸಿದ ವಸ್ತುಗಳ ಮಾರಾಟ ಮಾಡುವ ಬಗ್ಗೆ, ಉತ್ಪನ್ನಗಳ ರಫ್ತು ಮಾಡುವ ಬಗ್ಗೆ, ಕಡಿಮೆ ಬಂಡವಾಳದಲ್ಲಿ ಸ್ಟಾರ್ಟ್ ಅಪ್ ತೆರೆಯುವ ಬಗ್ಗೆ, ಉದ್ಯಮಗಳ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ನುರಿತ ತಜ್ಞರು ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.ಇದೇ ವೇಳೆ ಬಿಜೆಪಿ ಅದ್ಯಕ್ಷ ಮಲ್ಲಿಕಾರ್ಜುನ ಪೂಜಾರ, ಜಿಲ್ಲಾ ಉಪಾಧ್ಯಕ್ಷ ಹಣ್ಣಿ ಶಶಿಧರ, ಮುಖಂಡರಾದ ವಾರದ ಗೌಸ್ ಮೊಹಿದ್ದೀನ್, ಸೊಪ್ಪಿನ ಮಂಜುನಾಥ, ಹೆಚ್.ಪೂಜಪ್ಪ, ಸಿ.ಮೋಹನ್ ರೆಡ್ಡಿ, ತಳವಾರ ಮಹಾಂತೇಶ ಇದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 