ಅಮೀರಶಾವಲಿ ದರ್ಗಾ ಉರುಸು ಅಂಗವಾಗಿ ಶಾಸಕ ಮಾನೆವರು ದರ್ಗಾಕ್ಕೆ ಭೇಟಿ
MLA Manewar visits Dargah as part of Ameerashawali Dargah Urs
ಲೋಕದರ್ಶನ ವರದಿ
ಹಾನಗಲ್ 16 :ತಾಲೂಕಿನ ಅಕಿಆಲೂರಿನ ಅಮೀರಶಾವಲಿ ದರ್ಗಾ ಉರುಸು ಅಂಗವಾಗಿ ಶಾಸಕ ಶ್ರೀನಿವಾಸ ಮಾನೆ ದರ್ಗಾಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಉರುಸು,ಜಾತ್ರೆಗಳಿಗೆ ತನ್ನದೇ ಆದ ವೈಶಿಷ್ಟ್ಯಪೂರ್ಣ ಹಿನ್ನಲೆ ಇದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಕೂಡ ಆಧುನಿಕತೆಯ ಅಬ್ಬರದ ಮಧ್ಯೆಯೂ ಸಹ ಆಚರಣೆಗಳು ಜೀವಂತವಾಗಿವೆ. ಗ್ರಾಮೀಣ ಜನರ ಕಾಳಜಿಯ ಕಾರಣದಿಂದಲೇ ಭಾರತೀಯ ಸಂಸ್ಕೃತಿಯ ಬೇರುಗಳು ಇಂದಿಗೂ ಜೀವಂತವಾಗಿವೆ. ಧರ್ಮಗಳ ಮಧ್ಯೆ ಸಂಘರ್ಷ ಮೂಡಿಸುವರ ಬಗ್ಗೆ ಎಚ್ಚರಿಕೆ ವಹಿಸಿ ಶಾಂತಿ, ಸೌಹಾರ್ದ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹ ಗಮನ ನೀಡಬೇಕಿದೆ ಎಂದು ಶಾಸಕ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಅಂಜುಮನ್ ಇಸ್ಲಾಂ ಅಧ್ಯಕ್ಷ ಮೆಹಬೂಬಅಲಿ ಬ್ಯಾಡಗಿ,ಉರುಸು ಕಮಿಟಿ ಅಧ್ಯಕ್ಷ ಮಕ್ಬೂಲ್ಅಹ್ಮದ್ ಬಾಳೂರ, ಪ್ರಮುಖರಾದ ಮಕುಲಾ ಶಿರಹಟ್ಟಿ, ಆರೀಫ್ ಸುತಾರ, ತಾಹೇರ ಪಾಟೀಲ, ಮೊದಿನ ಸೈಕಲಗಾರ, ಗುಲ್ಫರಾಜ್ ಜಾಲೇಗಾರ, ಗುಲ್ಜರ್ ಬಾಳೂರ, ಮುನ್ನಾ ಹಾನಗಲ್, ಶಾನು ಅಣ್ಣಿಗೇರಿ, ತೌಫಿಕ್ ಅತ್ತಾರ, ಸಯ್ಯದ್ಅಲಿ ಚೌದರಿ, ಜಾವಿದ್ ತಿಳವಳ್ಳಿ ಸೇರಿದಂತೆ ಅನೇಕರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 