ಅಮೀರಶಾವಲಿ ದರ್ಗಾ ಉರುಸು ಅಂಗವಾಗಿ ಶಾಸಕ ಮಾನೆವರು ದರ್ಗಾಕ್ಕೆ ಭೇಟಿ
MLA Manewar visits Dargah as part of Ameerashawali Dargah Urs
ಲೋಕದರ್ಶನ ವರದಿ
ಹಾನಗಲ್ 16 :ತಾಲೂಕಿನ ಅಕಿಆಲೂರಿನ ಅಮೀರಶಾವಲಿ ದರ್ಗಾ ಉರುಸು ಅಂಗವಾಗಿ ಶಾಸಕ ಶ್ರೀನಿವಾಸ ಮಾನೆ ದರ್ಗಾಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಉರುಸು,ಜಾತ್ರೆಗಳಿಗೆ ತನ್ನದೇ ಆದ ವೈಶಿಷ್ಟ್ಯಪೂರ್ಣ ಹಿನ್ನಲೆ ಇದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಕೂಡ ಆಧುನಿಕತೆಯ ಅಬ್ಬರದ ಮಧ್ಯೆಯೂ ಸಹ ಆಚರಣೆಗಳು ಜೀವಂತವಾಗಿವೆ. ಗ್ರಾಮೀಣ ಜನರ ಕಾಳಜಿಯ ಕಾರಣದಿಂದಲೇ ಭಾರತೀಯ ಸಂಸ್ಕೃತಿಯ ಬೇರುಗಳು ಇಂದಿಗೂ ಜೀವಂತವಾಗಿವೆ. ಧರ್ಮಗಳ ಮಧ್ಯೆ ಸಂಘರ್ಷ ಮೂಡಿಸುವರ ಬಗ್ಗೆ ಎಚ್ಚರಿಕೆ ವಹಿಸಿ ಶಾಂತಿ, ಸೌಹಾರ್ದ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹ ಗಮನ ನೀಡಬೇಕಿದೆ ಎಂದು ಶಾಸಕ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಅಂಜುಮನ್ ಇಸ್ಲಾಂ ಅಧ್ಯಕ್ಷ ಮೆಹಬೂಬಅಲಿ ಬ್ಯಾಡಗಿ,ಉರುಸು ಕಮಿಟಿ ಅಧ್ಯಕ್ಷ ಮಕ್ಬೂಲ್ಅಹ್ಮದ್ ಬಾಳೂರ, ಪ್ರಮುಖರಾದ ಮಕುಲಾ ಶಿರಹಟ್ಟಿ, ಆರೀಫ್ ಸುತಾರ, ತಾಹೇರ ಪಾಟೀಲ, ಮೊದಿನ ಸೈಕಲಗಾರ, ಗುಲ್ಫರಾಜ್ ಜಾಲೇಗಾರ, ಗುಲ್ಜರ್ ಬಾಳೂರ, ಮುನ್ನಾ ಹಾನಗಲ್, ಶಾನು ಅಣ್ಣಿಗೇರಿ, ತೌಫಿಕ್ ಅತ್ತಾರ, ಸಯ್ಯದ್ಅಲಿ ಚೌದರಿ, ಜಾವಿದ್ ತಿಳವಳ್ಳಿ ಸೇರಿದಂತೆ ಅನೇಕರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 