ಅಮೀರಶಾವಲಿ ದರ್ಗಾ ಉರುಸು ಅಂಗವಾಗಿ ಶಾಸಕ ಮಾನೆವರು ದರ್ಗಾಕ್ಕೆ ಭೇಟಿ
MLA Manewar visits Dargah as part of Ameerashawali Dargah Urs
ಲೋಕದರ್ಶನ ವರದಿ
ಹಾನಗಲ್ 16 :ತಾಲೂಕಿನ ಅಕಿಆಲೂರಿನ ಅಮೀರಶಾವಲಿ ದರ್ಗಾ ಉರುಸು ಅಂಗವಾಗಿ ಶಾಸಕ ಶ್ರೀನಿವಾಸ ಮಾನೆ ದರ್ಗಾಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಉರುಸು,ಜಾತ್ರೆಗಳಿಗೆ ತನ್ನದೇ ಆದ ವೈಶಿಷ್ಟ್ಯಪೂರ್ಣ ಹಿನ್ನಲೆ ಇದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಕೂಡ ಆಧುನಿಕತೆಯ ಅಬ್ಬರದ ಮಧ್ಯೆಯೂ ಸಹ ಆಚರಣೆಗಳು ಜೀವಂತವಾಗಿವೆ. ಗ್ರಾಮೀಣ ಜನರ ಕಾಳಜಿಯ ಕಾರಣದಿಂದಲೇ ಭಾರತೀಯ ಸಂಸ್ಕೃತಿಯ ಬೇರುಗಳು ಇಂದಿಗೂ ಜೀವಂತವಾಗಿವೆ. ಧರ್ಮಗಳ ಮಧ್ಯೆ ಸಂಘರ್ಷ ಮೂಡಿಸುವರ ಬಗ್ಗೆ ಎಚ್ಚರಿಕೆ ವಹಿಸಿ ಶಾಂತಿ, ಸೌಹಾರ್ದ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹ ಗಮನ ನೀಡಬೇಕಿದೆ ಎಂದು ಶಾಸಕ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಅಂಜುಮನ್ ಇಸ್ಲಾಂ ಅಧ್ಯಕ್ಷ ಮೆಹಬೂಬಅಲಿ ಬ್ಯಾಡಗಿ,ಉರುಸು ಕಮಿಟಿ ಅಧ್ಯಕ್ಷ ಮಕ್ಬೂಲ್ಅಹ್ಮದ್ ಬಾಳೂರ, ಪ್ರಮುಖರಾದ ಮಕುಲಾ ಶಿರಹಟ್ಟಿ, ಆರೀಫ್ ಸುತಾರ, ತಾಹೇರ ಪಾಟೀಲ, ಮೊದಿನ ಸೈಕಲಗಾರ, ಗುಲ್ಫರಾಜ್ ಜಾಲೇಗಾರ, ಗುಲ್ಜರ್ ಬಾಳೂರ, ಮುನ್ನಾ ಹಾನಗಲ್, ಶಾನು ಅಣ್ಣಿಗೇರಿ, ತೌಫಿಕ್ ಅತ್ತಾರ, ಸಯ್ಯದ್ಅಲಿ ಚೌದರಿ, ಜಾವಿದ್ ತಿಳವಳ್ಳಿ ಸೇರಿದಂತೆ ಅನೇಕರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 