ಅಮೀರಶಾವಲಿ ದರ್ಗಾ ಉರುಸು ಅಂಗವಾಗಿ ಶಾಸಕ ಮಾನೆವರು ದರ್ಗಾಕ್ಕೆ ಭೇಟಿ
MLA Manewar visits Dargah as part of Ameerashawali Dargah Urs
ಲೋಕದರ್ಶನ ವರದಿ
ಹಾನಗಲ್ 16 :ತಾಲೂಕಿನ ಅಕಿಆಲೂರಿನ ಅಮೀರಶಾವಲಿ ದರ್ಗಾ ಉರುಸು ಅಂಗವಾಗಿ ಶಾಸಕ ಶ್ರೀನಿವಾಸ ಮಾನೆ ದರ್ಗಾಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಉರುಸು,ಜಾತ್ರೆಗಳಿಗೆ ತನ್ನದೇ ಆದ ವೈಶಿಷ್ಟ್ಯಪೂರ್ಣ ಹಿನ್ನಲೆ ಇದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಕೂಡ ಆಧುನಿಕತೆಯ ಅಬ್ಬರದ ಮಧ್ಯೆಯೂ ಸಹ ಆಚರಣೆಗಳು ಜೀವಂತವಾಗಿವೆ. ಗ್ರಾಮೀಣ ಜನರ ಕಾಳಜಿಯ ಕಾರಣದಿಂದಲೇ ಭಾರತೀಯ ಸಂಸ್ಕೃತಿಯ ಬೇರುಗಳು ಇಂದಿಗೂ ಜೀವಂತವಾಗಿವೆ. ಧರ್ಮಗಳ ಮಧ್ಯೆ ಸಂಘರ್ಷ ಮೂಡಿಸುವರ ಬಗ್ಗೆ ಎಚ್ಚರಿಕೆ ವಹಿಸಿ ಶಾಂತಿ, ಸೌಹಾರ್ದ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹ ಗಮನ ನೀಡಬೇಕಿದೆ ಎಂದು ಶಾಸಕ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಅಂಜುಮನ್ ಇಸ್ಲಾಂ ಅಧ್ಯಕ್ಷ ಮೆಹಬೂಬಅಲಿ ಬ್ಯಾಡಗಿ,ಉರುಸು ಕಮಿಟಿ ಅಧ್ಯಕ್ಷ ಮಕ್ಬೂಲ್ಅಹ್ಮದ್ ಬಾಳೂರ, ಪ್ರಮುಖರಾದ ಮಕುಲಾ ಶಿರಹಟ್ಟಿ, ಆರೀಫ್ ಸುತಾರ, ತಾಹೇರ ಪಾಟೀಲ, ಮೊದಿನ ಸೈಕಲಗಾರ, ಗುಲ್ಫರಾಜ್ ಜಾಲೇಗಾರ, ಗುಲ್ಜರ್ ಬಾಳೂರ, ಮುನ್ನಾ ಹಾನಗಲ್, ಶಾನು ಅಣ್ಣಿಗೇರಿ, ತೌಫಿಕ್ ಅತ್ತಾರ, ಸಯ್ಯದ್ಅಲಿ ಚೌದರಿ, ಜಾವಿದ್ ತಿಳವಳ್ಳಿ ಸೇರಿದಂತೆ ಅನೇಕರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 