ಲಿಂಗೈಕ್ಯೆ ಬಸವಪ್ರಭು ದೇವರು ಮನೆಗೆ ಶಾಸಕ ನಾಡಗೌಡ ಭೇಟಿ
MLA Nadagowda visits the house of Lingayekye Basavaprabhu Dev
ತಾಳಿಕೋಟಿ 16: ಪಟ್ಟಣದ ಕೈಲಾಸ ಪೇಟೆಯ ಬಸವಪ್ರಭು ದೇವರು ಬುಧವಾರ ಲಿಂಗೈಕ್ಯೆರಾದ ಹಿನ್ನೆಲೆಯಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡರು ಭೇಟಿ ನೀಡಿದರು. ಶುಕ್ರವಾರ ಪಟ್ಟಣದ ಕೈಲಾಸ ಪೇಟೆಯಲ್ಲಿರುವ ಶ್ರೀಗಳ ಮನೆಗೆ ಭೇಟಿ ನೀಡಿದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.
ನಂತರ ಮಾತನಾಡಿದ ಅವರು ಬಸವಪ್ರಭು ಶ್ರೀಗಳು ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರವಾದ ಸೇವೆಯನ್ನು ನೀಡಿದ್ದಾರೆ. ನೇರ ನುಡಿಯ, ಪ್ರಖರ ವಾಗ್ಮಿಗಳಾದ ಅವರು ಒಳ್ಳೆಯ ಪ್ರವಚನಕಾರರೂ ಆಗಿದ್ದು ಸರಳ ವ್ಯಕ್ತಿತ್ವ ರೂಡಿಸಿಕೊಂಡಿದ್ದರು. ಅವರ ಅಗಲಿಕೆ ಆಧ್ಯಾತ್ಮಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ಮುಖಂಡರಾದ ಸಿದ್ದನಗೌಡ ಪಾಟೀಲ (ನಾವದಗಿ),ಪ್ರಭುಗೌಡ ಮದರಕಲ್ಲ, ಶ್ರೀಗಳ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 