ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ನಾರಾ ಭರತ್ ರೆಡ್ಡಿ
MLA Nara Bharat Reddy performed Bhoomi Puja for various works
ಬಳ್ಳಾರಿ 16: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು.ಗುರುವಾರ ಮಹರ್ಷಿ ವಾಲ್ಮೀಕಿ ವೃತ್ತ ಸಮೀಪ ಶಾಸಕರ ವಿಶೇಷ ಅನುದಾನದಡಿ ನಿರ್ಮಿಸಲಾದ ಮಳಿಗೆಗಳನ್ನು ಬೀದಿ ಬದಿ ವ್ಯಾಪಾರಿಗಳಿಗೆ ಚೀಟಿ ಎತ್ತುವ ಮೂಲಕ ಪಾರದರ್ಶಕವಾಗಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಮಂಜುನಾಥ, ಮೇಯರ್ ಗಾದೆಪ್ಪ, ಸದಸ್ಯರಾದ ಗುಡಿಗಂಟಿ ಹನುಮಂತ, ಕುಬೇರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.ಇದಾದ ನಂತರ 39ನೇ ವಾರ್ಡ್ನ ನೇತಾಜಿ ನಗರದಲ್ಲಿರುವ ಶ್ರೀ ಗಣೇಶ ದೇವಸ್ಥಾನ ಸಮೀಪ ಅಂದಾಜು 80.63 ಲಕ್ಷ ವೆಚ್ಚದಲ್ಲಿ ಒಳಚರಂಡಿ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಪಿ. ಜಗನ್, ಮಾರೆಣ್ಣ, ಎರುಕುಲಸ್ವಾಮಿ, ಮಲ್ಲಿಕಾರ್ಜುನಸ್ವಾಮಿ, ಸೋಮಶೇಖರ್, ಸಿದ್ಧೇಶ್, ಸುಬ್ಬರಾಯುಡು, ನರೇಂದ್ರ ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು.ಮುಂದೆ 36ನೇ ವಾರ್ಡ್ ವ್ಯಾಪ್ತಿಯ ಹಾವಂಭಾವಿ ಕಾಲುವೆ ಬಳಿ ರಸ್ತೆ ಅಭಿವೃದ್ಧಿ, ಮಳೆನೀರು ಚರಂಡಿ, ಒಳಚರಂಡಿ ಹಾಗೂ ಪೇವರ್ಸ್ ಅಳವಡಿಕೆ ಸೇರಿದಂತೆ ?2 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದೇ ಪ್ರದೇಶದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಕೊಠಡಿ ನಿರ್ಮಾಣಕ್ಕೆ 16.5 ಲಕ್ಷ ವೆಚ್ಚದ ಕಾಮಗಾರಿಗೂ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಟಿ.ಎಂ.ಜಿ. ಲೋಕೇಶ್, ಗಂಗಪ್ಪ, ಗಂಗಾಧರ್, ಸೋಮು ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಶಾಲಾ ಸಿಬ್ಬಂದಿ ಹಾಜರಿದ್ದರು.ಇದಾದ ಬಳಿಕ ಗಡಿಗಿ ಚನ್ನಪ್ಪ ವೃತ್ತದಲ್ಲಿ ಸಂಚಾರ ಅಸ್ತವ್ಯಸ್ತತೆಯ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ, ಪಾಲಿಕೆ ಅಧಿಕಾರಿಗಳು ಮತ್ತು ಸಂಚಾರಿ ಪೊಲೀಸರಿಗೆ ಅಗತ್ಯ ಸೂಚನೆಗಳನ್ನು ನೀಡಿದರು.ಸಂಜೆಯ ವೇಳೆ ನಿರ್ಮಾಣ ಹಂತದಲ್ಲಿರುವ ಗುಗ್ಗರಹಟ್ಟಿಯ ಸೇತುವೆ ಹಾಗೂ ರಸ್ತೆ ಕಾಮಗಾರಿಗಳನ್ನು ವೀಕ್ಷಿಸಿ, ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 