ಕ್ಷೇತ್ರದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಶಾಸಕ ಪಠಾಣ
MLA Pathana sheds light on the problems of the constituency
ಕ್ಷೇತ್ರದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಶಾಸಕ ಪಠಾಣ
ಶಿಗ್ಗಾವಿ 03 : ನನ್ನ ಮತಕ್ಷೇತ್ರ ಶಿಗ್ಗಾವಿ-ಸವಣೂರ ತಾಲೂಕು ಸೇರಿದಂತೆ ವಿವಿಧ ಭಾಗಗಳಲ್ಲಿ ರೈತರು ತಮ್ಮ ಕೃಷಿ ಜಮೀನಿನಲ್ಲಿ ಕೆಂಪು ಇಟ್ಟಿಗೆ ತಯಾರಿಸುತ್ತಿದ್ದಾರೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆಯವರು ರೈತರಿಗೆ ಮಾಹಿತಿ ಇಲ್ಲದೆ ಪಹಣಿಯಲ್ಲಿ ತಾಲೂಕಿನಲ್ಲಿ ಸುಮಾರು ರೈತರಿಗೆ 5 ಕೋಟಿ ರೂಪಾಯಿಗೂ ಹೆಚ್ಚು ಭೋಜ ಕೂರಿಸಿದ್ದಾರೆ. ಕೂರಿಸಿದ ಪರಿಣಾಮ ರೈತರಿಗೆ ಬೆಳೆ ಸಾಲ, ಯಾವುದೇ ರೀತಿಯ ಸರ್ಕಾರದ ಸವಲತ್ತುಗಳು ಪಡೆದುಕೊಳ್ಳಲು ಸಾಧ್ಯವಾಗದೇ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಭಾದ್ಯಕ್ಷರಿಗೆ ಮನವಿ ಮಾಡಿದರು. ಈ ವಿಷಯವಾಗಿ ಹಿಂದೆ ಜಿಲ್ಲಾ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಪಹಣಿಯಲ್ಲಿರುವ ಭೋಜ ತೆಗೆಯಲು ಕಂದಾಯ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿತ್ತು ಆದರೂ ಸಹಿತ ವಿಳಂಬವಾದ ಹಿನ್ನೆಲೆಯಲ್ಲಿ ಸದನದಲ್ಲಿ ಮತ್ತೊಮ್ಮೆ ಸಭಾಧಕ್ಷರ ಮತ್ತು ಸಚಿವರ ಗಮನ ಸೆಳೆದೆನು. ತಕ್ಷಣ ಸ್ಪಂದಿಸಿದ ಸಚಿವರು ಮಗದೊಮ್ಮೆ ದಾಖಲೆಗಳನ್ನು ಪರೀಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 