ಕ್ಷೇತ್ರದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಶಾಸಕ ಪಠಾಣ
MLA Pathana sheds light on the problems of the constituency
ಕ್ಷೇತ್ರದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಶಾಸಕ ಪಠಾಣ
ಶಿಗ್ಗಾವಿ 03 : ನನ್ನ ಮತಕ್ಷೇತ್ರ ಶಿಗ್ಗಾವಿ-ಸವಣೂರ ತಾಲೂಕು ಸೇರಿದಂತೆ ವಿವಿಧ ಭಾಗಗಳಲ್ಲಿ ರೈತರು ತಮ್ಮ ಕೃಷಿ ಜಮೀನಿನಲ್ಲಿ ಕೆಂಪು ಇಟ್ಟಿಗೆ ತಯಾರಿಸುತ್ತಿದ್ದಾರೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆಯವರು ರೈತರಿಗೆ ಮಾಹಿತಿ ಇಲ್ಲದೆ ಪಹಣಿಯಲ್ಲಿ ತಾಲೂಕಿನಲ್ಲಿ ಸುಮಾರು ರೈತರಿಗೆ 5 ಕೋಟಿ ರೂಪಾಯಿಗೂ ಹೆಚ್ಚು ಭೋಜ ಕೂರಿಸಿದ್ದಾರೆ. ಕೂರಿಸಿದ ಪರಿಣಾಮ ರೈತರಿಗೆ ಬೆಳೆ ಸಾಲ, ಯಾವುದೇ ರೀತಿಯ ಸರ್ಕಾರದ ಸವಲತ್ತುಗಳು ಪಡೆದುಕೊಳ್ಳಲು ಸಾಧ್ಯವಾಗದೇ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಭಾದ್ಯಕ್ಷರಿಗೆ ಮನವಿ ಮಾಡಿದರು. ಈ ವಿಷಯವಾಗಿ ಹಿಂದೆ ಜಿಲ್ಲಾ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಪಹಣಿಯಲ್ಲಿರುವ ಭೋಜ ತೆಗೆಯಲು ಕಂದಾಯ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿತ್ತು ಆದರೂ ಸಹಿತ ವಿಳಂಬವಾದ ಹಿನ್ನೆಲೆಯಲ್ಲಿ ಸದನದಲ್ಲಿ ಮತ್ತೊಮ್ಮೆ ಸಭಾಧಕ್ಷರ ಮತ್ತು ಸಚಿವರ ಗಮನ ಸೆಳೆದೆನು. ತಕ್ಷಣ ಸ್ಪಂದಿಸಿದ ಸಚಿವರು ಮಗದೊಮ್ಮೆ ದಾಖಲೆಗಳನ್ನು ಪರೀಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 