155.84 ಲಕ್ಷ ಅನುದಾನದಲ್ಲಿ ಒಳಚರಂಡಿ ಕಾಮಗಾರಿಗೆ ಶಾಸಕ ಪ್ರಕಾಶ ಕೋಳಿವಾಡ ಭೂಮಿ ಪೂಜೆ ನಡೆಸಿದರು
MLA Prakash Koliwada performed Bhumi Pooja for drainage work with a grant of 155.84 lakhs
155.84 ಲಕ್ಷ ಅನುದಾನದಲ್ಲಿ ಒಳಚರಂಡಿ ಕಾಮಗಾರಿಗೆ ಶಾಸಕ ಪ್ರಕಾಶ ಕೋಳಿವಾಡ ಭೂಮಿ ಪೂಜೆ ನಡೆಸಿದರು
ರಾಣಿಬೆನ್ನೂರ 13: ಪಟ್ಟಣ ದಿನದಿಂದ ದಿನಕ್ಕೆ ಅತಿ ವೇಗದಲ್ಲಿ ಬೆಳೆಯುತ್ತಿದೆ. ನೂತನ ಬಡಾವಣೆಗಳು ಹೆಚ್ಚುತ್ತಿವೆ. ವರ್ಷಕ್ಕೆ ನೂರಾರು ಮನೆಗಳು ನಿರ್ಮಾಣಗೊಳ್ಳುತ್ತಿದ್ದು, ಜನಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಸಾರ್ವಜನಿಕರ ಸಮಸ್ಯೆಗೆ ಒಳಚರಂಡಿ ಪೈಪ್ಲೈನ್ ಮಾರ್ಗವನ್ನು ಸ್ಥಳಾಂತರಿಸುವುದರಿಂದ ಪರಿಹಾರ ಸಿಗಲಿದೆ. ಹಾಗಾಗಿ ಮೂಲ ಸೌಕರ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಇಲ್ಲಿನ ದೇವರಗುಡ್ಡ ರಸ್ತೆಯ ವಾರ್ಡ್ ನಂ.2 ರ ರೈಲ್ವೆ ಮೇಲು ಸೇತುವೆ ಬಳಿ ಒಳಚರಂಡಿ ಪೈಪ್ಲೈನ್ ಮಾರ್ಗವನ್ನು ಸ್ಥಳಾಂತರಿಸುವ 155.84 ಲಕ್ಷದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಳಚರಂಡಿ ಮಾರ್ಗಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಕಾಮಗಾರಿ ಅನುಕೂಲವಾಗಲಿದೆ ಎಂದರು.
ನಗರಸಭೆ ಸದಸ್ಯರಾದ ಪುಟ್ಟಪ್ಪ ಮರಿಯಮ್ಮನವರ, ಮಲ್ಲಿಕಾರ್ಜುನ ಅಂಗಡಿ, ಪ್ರಕಾಶ ಪೂಜಾರ, ಶಶಿಧರ ಬಸೆನಾಯಕ, ಪೌರಾಯುಕ್ತ ಎಫ್.ವೈ.ಇಂಗಳಗಿ ಹಾಗೂ ಪರಿಸರ ಎಂಜಿನಿಯರ್ ಮಹೇಶ್ವರ, ಎಂಜಿನಿಯರ್ ಎಂ.ಎಸ್. ಗುಡಿಸಲಮನಿ, ನಿರ್ಮಲಾ, ಮಲ್ಲೇಶಪ್ಪ ಮದ್ಲೇರ, ಮಧು ಕೋಳಿವಾಡ, ಕೋಟೆಪ್ಪ ಹಾಗೂ ಗುತ್ತಿಗೆದಾರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 