155.84 ಲಕ್ಷ ಅನುದಾನದಲ್ಲಿ ಒಳಚರಂಡಿ ಕಾಮಗಾರಿಗೆ ಶಾಸಕ ಪ್ರಕಾಶ ಕೋಳಿವಾಡ ಭೂಮಿ ಪೂಜೆ ನಡೆಸಿದರು
MLA Prakash Koliwada performed Bhumi Pooja for drainage work with a grant of 155.84 lakhs
155.84 ಲಕ್ಷ ಅನುದಾನದಲ್ಲಿ ಒಳಚರಂಡಿ ಕಾಮಗಾರಿಗೆ ಶಾಸಕ ಪ್ರಕಾಶ ಕೋಳಿವಾಡ ಭೂಮಿ ಪೂಜೆ ನಡೆಸಿದರು
ರಾಣಿಬೆನ್ನೂರ 13: ಪಟ್ಟಣ ದಿನದಿಂದ ದಿನಕ್ಕೆ ಅತಿ ವೇಗದಲ್ಲಿ ಬೆಳೆಯುತ್ತಿದೆ. ನೂತನ ಬಡಾವಣೆಗಳು ಹೆಚ್ಚುತ್ತಿವೆ. ವರ್ಷಕ್ಕೆ ನೂರಾರು ಮನೆಗಳು ನಿರ್ಮಾಣಗೊಳ್ಳುತ್ತಿದ್ದು, ಜನಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಸಾರ್ವಜನಿಕರ ಸಮಸ್ಯೆಗೆ ಒಳಚರಂಡಿ ಪೈಪ್ಲೈನ್ ಮಾರ್ಗವನ್ನು ಸ್ಥಳಾಂತರಿಸುವುದರಿಂದ ಪರಿಹಾರ ಸಿಗಲಿದೆ. ಹಾಗಾಗಿ ಮೂಲ ಸೌಕರ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಇಲ್ಲಿನ ದೇವರಗುಡ್ಡ ರಸ್ತೆಯ ವಾರ್ಡ್ ನಂ.2 ರ ರೈಲ್ವೆ ಮೇಲು ಸೇತುವೆ ಬಳಿ ಒಳಚರಂಡಿ ಪೈಪ್ಲೈನ್ ಮಾರ್ಗವನ್ನು ಸ್ಥಳಾಂತರಿಸುವ 155.84 ಲಕ್ಷದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಳಚರಂಡಿ ಮಾರ್ಗಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಕಾಮಗಾರಿ ಅನುಕೂಲವಾಗಲಿದೆ ಎಂದರು.
ನಗರಸಭೆ ಸದಸ್ಯರಾದ ಪುಟ್ಟಪ್ಪ ಮರಿಯಮ್ಮನವರ, ಮಲ್ಲಿಕಾರ್ಜುನ ಅಂಗಡಿ, ಪ್ರಕಾಶ ಪೂಜಾರ, ಶಶಿಧರ ಬಸೆನಾಯಕ, ಪೌರಾಯುಕ್ತ ಎಫ್.ವೈ.ಇಂಗಳಗಿ ಹಾಗೂ ಪರಿಸರ ಎಂಜಿನಿಯರ್ ಮಹೇಶ್ವರ, ಎಂಜಿನಿಯರ್ ಎಂ.ಎಸ್. ಗುಡಿಸಲಮನಿ, ನಿರ್ಮಲಾ, ಮಲ್ಲೇಶಪ್ಪ ಮದ್ಲೇರ, ಮಧು ಕೋಳಿವಾಡ, ಕೋಟೆಪ್ಪ ಹಾಗೂ ಗುತ್ತಿಗೆದಾರರು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 