ಪಾರ್ಥನಹಳ್ಳಿಯಲ್ಲಿ ಶಾದಿ ಮಹಲಗೆ ಶಾಸಕ ರಾಜು ಕಾಗೆ ಶಂಕುಸ್ಥಾಪನೆ
MLA Raju Kage laid the foundation stone for Shadi Mahal in Parthanahalli
ಅಥಣಿ 05: ಅನಂತಪೂರ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿಯೂ ಹಂತ ಹಂತವಾಗಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಅವರು ಪಾರ್ಥನಹಳ್ಳಿ ಗ್ರಾಮದಲ್ಲಿ ಶಾದಿ ಮಹಲ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಈ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ನೀರಿನ ತೊಂದರೆ ಇದೆ ಹೀಗಾಗಿ ಬೇಸಿಗೆ ಅವಧಿಯಲ್ಲಿ ನೀರಿನ ಕೊರತೆಯಾಗುತ್ತದೆ ಹೀಗಾಗಿ ಈ ಭಾಗದ ಜನ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ಎಂದು ಆಗ್ರಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನೀರಾವರಿ ಯೋಜನೆಗಳನ್ನು ಅನುಷ್ಠಾನ ಗೊಳಿಸುವುದಾಗಿ ಹೇಳಿದರು. ಜಿಲ್ಲಾ ಪಂಚಾಯತ ಇಲಾಖೆಯಡಿ ಮಂಜೂರಾದ 20 ಲಕ್ಷ ವೆಚ್ಚದ ಶಾದಿ ಮಹಲ ಕಟ್ಟಡದ ಉಪಯೋಗವನ್ನು ಮುಸ್ಲಿಂ ಸಮಾಜ ಬಾಂಧವರು ಮಾಡಿಕೊಳ್ಳಬೇಕು ಎಂದ ಅವರು ಕಾಮಗಾರಿ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ಪಾರ್ಥನಹಳ್ಳಿ ಗ್ರಾಮದ ಮುಖಂಡ ರಫಿಕ್ ಪಟೇಲ್ ಗುದ್ದಲಿ ಪೂಜೆ ನೆರವೇರಿಸಿದರು. ಧುರೀಣರಾದ ಸಿದರಾಯ ತೇಲಿ, ಷರೀಫ ಮುಲ್ಲಾ, ಸದಾಶಿವ ಬಿರಾದಾರ, ಇಲಾಹಿ ಮೋಳೆ, ಬಂಡು ನಾಯಿಕ, ಕಾಡಪ್ಪಾ ಸಿಂಗಾಡಿ, ಸಿಕಂದರ ಪಟೇಲ್, ಇಸ್ಮಾಯಿಲ ಪಟೇಲ್, ರಮೇಶ ಕಾಂಬಳೆ, ಅಮೀರ್ ಪಟೇಲ್, ಇಬ್ರಾಹಿಂ ಮೋಳೆ, ಪಿ.ಡಿ.ಒ ಸುರೇಶ ದೊಡ್ಮನಿ ಸೇರಿದಂತೆ ಅನೇಕರು ಉಪಸಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 