ಪಾರ್ಥನಹಳ್ಳಿಯಲ್ಲಿ ಶಾದಿ ಮಹಲಗೆ ಶಾಸಕ ರಾಜು ಕಾಗೆ ಶಂಕುಸ್ಥಾಪನೆ
MLA Raju Kage laid the foundation stone for Shadi Mahal in Parthanahalli
ಅಥಣಿ 05: ಅನಂತಪೂರ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿಯೂ ಹಂತ ಹಂತವಾಗಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಅವರು ಪಾರ್ಥನಹಳ್ಳಿ ಗ್ರಾಮದಲ್ಲಿ ಶಾದಿ ಮಹಲ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಈ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ನೀರಿನ ತೊಂದರೆ ಇದೆ ಹೀಗಾಗಿ ಬೇಸಿಗೆ ಅವಧಿಯಲ್ಲಿ ನೀರಿನ ಕೊರತೆಯಾಗುತ್ತದೆ ಹೀಗಾಗಿ ಈ ಭಾಗದ ಜನ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ಎಂದು ಆಗ್ರಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನೀರಾವರಿ ಯೋಜನೆಗಳನ್ನು ಅನುಷ್ಠಾನ ಗೊಳಿಸುವುದಾಗಿ ಹೇಳಿದರು. ಜಿಲ್ಲಾ ಪಂಚಾಯತ ಇಲಾಖೆಯಡಿ ಮಂಜೂರಾದ 20 ಲಕ್ಷ ವೆಚ್ಚದ ಶಾದಿ ಮಹಲ ಕಟ್ಟಡದ ಉಪಯೋಗವನ್ನು ಮುಸ್ಲಿಂ ಸಮಾಜ ಬಾಂಧವರು ಮಾಡಿಕೊಳ್ಳಬೇಕು ಎಂದ ಅವರು ಕಾಮಗಾರಿ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ಪಾರ್ಥನಹಳ್ಳಿ ಗ್ರಾಮದ ಮುಖಂಡ ರಫಿಕ್ ಪಟೇಲ್ ಗುದ್ದಲಿ ಪೂಜೆ ನೆರವೇರಿಸಿದರು. ಧುರೀಣರಾದ ಸಿದರಾಯ ತೇಲಿ, ಷರೀಫ ಮುಲ್ಲಾ, ಸದಾಶಿವ ಬಿರಾದಾರ, ಇಲಾಹಿ ಮೋಳೆ, ಬಂಡು ನಾಯಿಕ, ಕಾಡಪ್ಪಾ ಸಿಂಗಾಡಿ, ಸಿಕಂದರ ಪಟೇಲ್, ಇಸ್ಮಾಯಿಲ ಪಟೇಲ್, ರಮೇಶ ಕಾಂಬಳೆ, ಅಮೀರ್ ಪಟೇಲ್, ಇಬ್ರಾಹಿಂ ಮೋಳೆ, ಪಿ.ಡಿ.ಒ ಸುರೇಶ ದೊಡ್ಮನಿ ಸೇರಿದಂತೆ ಅನೇಕರು ಉಪಸಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 