ಬೆಳೆ ಹಾನಿ ಪ್ರದೇಶಕ್ಕೆ ಶಾಸಕ ರಾಜುಗೌಡ ಹಾಗೂ ಅಧಿಕಾರಿಗಳು ಭೇಟಿ ಪರೀಶೀಲನೆ
MLA Rajugowda and officials visit crop damage area to inspect
ದೇವರಹಿಪ್ಪರಗಿ 28: ತಾಲೂಕಿನಲ್ಲಿ ನಿರಂತರವಾಗಿ ಸುರಿದ ಮಳೆಗೆ ನೀರು ಜಮೀನಿಗೆ ನುಗ್ಗಿ ತೊಗರಿ ಹಾಗೂ ಹತ್ತಿ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ, ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತಕ್ಷಣ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡುವಂತೆ ತಹಶೀಲ್ದಾರ್ ಪ್ರಕಾಶ ಸಿಂದಗಿ ಹಾಗೂ ಕೃಷಿ ಇಲಾಖೆಯ ಅಧಿಕಾರಿ ಶರಣಗೌಡ ಪಾಟೀಲ ಅವರಿಗೆ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಸೂಚಿಸಿದರು.
ರವಿವಾರ ಸಂಜೆ ತಾಲೂಕಿನ ಸಾತಿಹಾಳ, ಬೈರವಾಡಗಿ,ಮಾರ್ಕಬಿನಹಳ್ಳಿ ಹಾಗೂ ದೇವರಹಿಪ್ಪರಗಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ನಿರಂತರ ಮಳೆಗೆ ಬೆಳೆ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಅವರು, ಬೆಳೆಯ ಮೇಲೆ ನೀರು ನಿಂತಿರುವಾಗಲೇ ಸಮೀಕ್ಷೆ ಮಾಡಬೇಕು. ಅಧಿಕಾರಿಗಳು ವಿಳಂಬ ಮಾಡಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದರು.ನೀರು ನುಗ್ಗಿ ಬೆಳೆ ಸಂಪೂರ್ಣವಾಗಿ ಹಾನಿಯಾಗಿದೆ. ಖುದ್ದು ಕ್ಷೇತ್ರಕ್ಕೆ ಭೇಟಿ ನೀಡಿದ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ರೈತರ ನೋವು ಆಲಿಸಿದರು.ಪ್ರತಿ ವರ್ಷ ಡೋಣಿ ನದಿ ತೀರದ ಪ್ರವಾಹದಿಂದ ಹಾಗೂ ಅತಿವೃಷ್ಟಿಯಿಂದ ನಮ್ಮ ಬೆಳೆ ನಾಶವಾಗುತ್ತಿದೆ. ಈ ಬಾರಿ ಸಾವಿರಾರು ಎಕರೆಗಟ್ಟಲೆ ಜಮೀನಿಗೆ ಹಾಕಿ ದುಡ್ಡು ಹೂಡಿದ್ದೇವೆ. ಈಗ ಬೆಳೆ ಕೊಯ್ಯುವ ಹೊತ್ತಿಗೆ ನೀರು ನುಗ್ಗಿ ಹಾಗೂ ನಿರಂತರ ಮಳೆಗೆ ಬೆಳೆ ಸಂಪೂರ್ಣವಾಗಿ ಹಾನಿಯಾಗಿದೆ. ಸರ್ಕಾರ ಸಹಾಯ ಮಾಡಬೇಕು ಎಂದು ರೈತರು ಬೇಸರ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು, ಬೆಳೆ ಹಾನಿಗೆ ಶೀಘ್ರ ಪರಿಹಾರ ಒದಗಿಸಲು ಸರ್ಕಾರದ ಮಟ್ಟದಲ್ಲಿ ವಿಶೇಷ ಅನುದಾನಕ್ಕಾಗಿ ಪ್ರಯತ್ನಿಸಲಾಗುವುದು. ರೈತರು ಕೂಡ ತಮ್ಮ ಹಾನಿಯ ಮಾಹಿತಿ ಸರಿಯಾಗಿ ಅಧಿಕಾರಿಗಳಿಗೆ ನೀಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಹಣಮಂತರಾಯಗೌಡ ಬಿರಾದಾರ, ವೀರೇಶ ಕುದರಿ,ನಾಗೇಶ ಅವಟಿ, ಸುನಿಲ್ ಮಾಗಿ, ಮಾಂತೇಶಗೌಡ ಪಾಟೀಲ, ಶಿವಾನಂದ ಮಾವಿನಗಿಡದ, ಆಡಳಿತ ಅಧಿಕಾರಿಗಳಾದ ಮಹಾದೇವಿ ಅಲ್ಲೊಳ್ಳಿ, ಅನಿಲ್ ರಾಠೋಡ ಸೇರಿದಂತೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 