ಸ್ವಾಮೀಜಿ ನಿಧನಕ್ಕೆ ಶಾಸಕ ರಾಜುಗೌಡ ಸಂತಾಪ
MLA Rajugowda condoles the death of Swamiji
ದೇವರಹಿಪ್ಪರಗಿ 12 : ಇಂಗಳೇಶ್ವರದ ವಚನಶಿಲಾ ಮಂಟಪದ ನಿರ್ಮಾತೃ ಪ.ಪೂ ಚನ್ನಬಸವ ಮಹಾಸ್ವಾಮಿಗಳು ಲಿಂಗೈಕೈರಾಗಿರುವ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.ಸುದ್ದಿಗಾರರ ಜೊತೆ ಶುಕ್ರವಾರದಂದು ಮಾತನಾಡಿದ ಅವರು,ನಾಡಿನ ಆಧ್ಯಾತ್ಮಿಕ, ಸಾಮಾಜಿಕ ಚಟುವಟಿಕೆಗಳ ಜೊತೆಗೆ ಇಂಗಳೇಶ್ವರದಲ್ಲಿ ಸುಮಾರು 1700 ವಚನಗಳ ಶಿಲಾಮಂಟಪ ಸ್ಥಾಪಿಸುವ ಮೂಲಕ ಸಮಾನತೆಯ ಸಂದೇಶ ಸಾರಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸರ್ವಾಧ್ಯಕ್ಷರಾಗಿ ಸಾಹಿತಿಗಳಿಗೆ ಮಾರ್ಗದರ್ಶಕರಾಗಿದ್ದರು.
ತಮ್ಮ ಹಲವು ಧಾರ್ಮಿಕ ಸಮಾಜಮುಖಿ ಸೇವಾ ಕಾರ್ಯಗಳಿಂದ ಭಕ್ತರ ಪಾಲಿಗೆ ನಡೆದಾಡುವ ದೇವರಾಗಿದ್ದರು. ಶ್ರೀಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ. ಭಕ್ತ ವೃಂದಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಜನತೆಯ ಪರವಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.ಗಣ್ಯರಿಂದ ಸಂತಾಪ: ದೇವರಹಿಪ್ಪರಗಿ ಪಟ್ಟಣದ ಶ್ರೀಗಳು, ಮಾಜಿ ಶಾಸಕರುಗಳಾದ ಸೋಮನಗೌಡ ಪಾಟೀಲ ಸಾಸನೂರ, ಶರಣಪ್ಪ ಸುಣಗಾರ,ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ), ಆನಂದಗೌಡ ದೋಡಮನಿ, ಕೆಪಿಸಿಸಿ ಸದಸ್ಯರಾದ ಬಿ.ಎಸ್.ಪಾಟೀಲ (ಯಾಳಗಿ) ಸೇರಿದಂತೆ ರಾಜಕೀಯ ಮುಖಂಡರು, ಪಟ್ಟಣದ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 