ಕನ್ನೋಳ್ಳಿ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ರಾಜುಗೌಡ
MLA Rajugowda visits Kannolli Sri and receives blessings
ದೇವರಹಿಪ್ಪರಗಿ 21: ಪಟ್ಟಣದ ಸಮೀಪವಿರುವ ಕನ್ನೋಳ್ಳಿ ಗ್ರಾಮದ ಹಿರೇಮಠಕ್ಕೆ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಮಂಗಳವಾರ ಭೇಟಿ ನೀಡಿ ಮರುಳಾರಾಧ್ಯ ಶಿವಾಚಾರ್ಯರ ಶ್ರೀಗಳ ಗದ್ದುಗೆ ದರ್ಶನ ಪಡೆದರು.ನಂತರ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ ಸನ್ಮಾನಿಸಿ, ಆಶೀರ್ವಾದ ಪಡೆದರು. ಶ್ರೀಗಳೊಂದಿಗೆ ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶ್ರೀಗಳ 111ನೇ ಜನ್ಮ ಜಯಂತೋತ್ಸವದ ಶುಭ ಸಂದರ್ಭದಲ್ಲಿ ಗದ್ದುಗೆ ದರ್ಶನ ಪಡೆಯುವಂತಹ ಸೌಭಾಗ್ಯ ನನಗೆ ಸಿಕ್ಕಿದೆ. ಪ್ರತಿ ದಿನವೂ ನಾನು ಶ್ರೀಗಳನ್ನು ನೆನಪು ಮಾಡಿಕೊಳ್ಳದೆ ಯಾವ ಕೆಲಸವು ಮಾಡುವುದಿಲ್ಲ, ಶ್ರೀಗಳ ಆಶೀರ್ವಾದದಿಂದ ಶಾಸಕನಾದ ಮೇಲೆ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ನಿರಂತರವಾಗಿ ಶ್ರಮಿಸುತ್ತಿದ್ದೇನೆ. ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ ಎಂದು ಹೇಳಿದರು. ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 