ಹತ್ಯೆಯಾದ ರಂಜಿತಾ ಬನಸೋಡೆ ಕುಟುಂಬಸ್ಥರಿಗೆ 8.5 ಲಕ್ಷ ರೂ. ಪರಿಹಾರ : ಚೆಕ್ ವಿತರಿಸಿದ ಶಾಸಕ ಶಿವರಾಮ ಹೆಬ್ಬಾರ್
MLA Shivaram Hebbar distributes Rs 8.5 lakh compensation to the family of murdered Ranjitha Banasode
ಕಾರವಾರ 04 : ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ಕೊಲೆಯಾದ ರಂಜಿತಾ ಬನಸೋಡೆ ಅವರ ಕುಟುಂಬಸ್ಥರಿಗೆ 8.5 ಲಕ್ಷ ರೂ. ಪರಿಹಾರ ಧನದ ಚೆಕ್ ನ್ನು ಶಾಸಕ ಶಿವರಾಮ ಹೆಬ್ಬಾರ್ ವಿತರಿಸಿದರು. ರಂಜಿತಾ ಬನಸೋಡೆ ಅಮಾನವೀಯವಾಗಿ ಕೊಲೆಯಾಗಿ ಮೃತಪಟ್ಟಿದ್ದು, ನಾಗರಿಕ ಸಮಾಜವನ್ನು ತಲೆತಗ್ಗಿಸುವಂತಹ ದುರ್ಘಟನೆಯಾಗಿದೆ ಎಂದು ಹೆಬ್ಬಾರ್ ಪ್ರತಿಕ್ರಿಯಿಸಿದರು.ರವಿವಾರ ಮೃತ ಮಹಿಳೆಯು ವಾಸವಿದ್ದ ಸಂಬಂಧಿಕರ ನಿವಾಸಕ್ಕೆ ಭೇಟಿ ನೀಡಿ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾದ 8.25 ಲಕ್ಷ ರೂಪಾಯಿ ಪರಿಹಾರ ಧನದ ಆದೇಶ ಪತ್ರವನ್ನು ಕುಟುಂಬಸ್ಥರಿಗೆ ವಿತರಿಸಿದರು. ಬಳಿಕ ರಂಜಿತಾ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ಅಧಿಕಾರ ದೀಪನ್.ಎಂ.ಎನ್, ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ, ತಹಶಿಲ್ದಾರ ಚಂದ್ರಶೇಖರ ಹೊಸ್ಮನಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿ.ಎಸ್. ಭಟ್ ಸೇರಿದಂತೆ ಪೋಲಿಸ್ ಇಲಾಖೆಯ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 