ಬಸ್ ಡಿಪೋ ಪ್ರಾರಂಭೋತ್ಸವಕ್ಕೆ ಶಾಸಕ ಶಿವರಾಮ ಹೆಬ್ಬಾರ ಚಾಲನೆ
MLA Shivarama Hebbar inaugurates bus depot inauguration ceremony
ಮುಂಡಗೋಡ, 17 :ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ವಾಕರಸಾ ಸಂಸ್ಥೆಯ ಘಟಕದ ಸಾರಿಗೆ ಕಾರ್ಯಾಚರಣೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಬಸ್ ಡಿಪೋದಲ್ಲಿ ಬಸ್ಗಳಿಗೆ ಪೂಜೆ ನೆರವೇರಿಸಿ ಬಸ್ಗಳ ಕಾರ್ಯಾರಂಭಕ್ಕೆ ಚಾಲನೆ ನೀಡುವ ಮೂಲಕ ಪೂರೈಸಿದ್ದಾರೆ.
ಚಾಲನೆ ನೀಡಿದ ಶಾಸಕ ಶಿವರಾಮ ಹೆಬ್ಬಾರ್ ಅಣತಿ ದೂರ ಬಸ್ನಲ್ಲಿ ಪ್ರಯಾಣಿಸಿದರು. ಬಸ್ ಡಿಪೋದಲ್ಲಿ ಗಿಡಕ್ಕೆ ನೀರುಣಿಸುವ ಮೂಲಕವಾಗಿ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ಸತೀಶ್ ನಾಯ್ಕ,ಮಾಜಿ ಶಾಸಕರಾದ ವಿ.ಎಸ್.ಪಾಟೀಲ್, ಕೆ.ಪಿ.ಸಿ.ಸಿ ಸದಸ್ಯರಾದ ವಿವೇಕ್ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ನಿಕಟಪೂರ್ವ ಅಧ್ಯಕ್ಷರಾದ ಜ್ಞಾನೇಶ್ವರ ಗುಡಿಯಾಳ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ತಾಲೂಕಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಆರ್.ಆರಿ್ಹರೇಮಠ, ಪಟ್ಟಣ ಪಂಚಾಯತ ಅಧ್ಯಕ್ಷರು, ಜಯಸುಧಾ ಭೋವಿ, ಮುಂಡಗೋಡ ಡಿಪೋ ವ್ಯವಸ್ಥಾಪಕ ರಾಜಶೇಖರ ಧನ್ಯಾಳ ಹಾಗೂ ಯಲ್ಲಾಪುರ ಡಿಪೋ ವ್ಯವಸ್ಥಾಪಕ ಸಂತೋಷ ವರ್ಣೇಕರ ಮುಂಡಗೋಡ ಬಸ್ ಕಂಟ್ರೋಲರ್ ಮುತ್ತುರಾಜ ದೊಡ್ಡನಿ ಸೇರಿದಂತೆ ಬಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಉಪಸ್ಥಿತರಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 