ರೂ.5 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿದ್ದು ಸವದಿ ಚಾಲನೆ
MLA Sidhu Savadi inaugurates road development work worth Rs. 5 lakh
ಲೋಕದರ್ಶನ ವರದಿ
ಮಹಾಲಿಂಗಪುರ 14: ತೇರದಾಳ ಮತಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿರುವ ಜನಪ್ರಿಯ ಶಾಸಕ ಸನ್ಮಾನ್ಯ ಶ್ರೀ ಸಿದ್ದು ಸವದಿ ಅವರು, ಮಹಾಲಿಂಗಪುರ ನಗರದ ವ್ಯಾಪ್ತಿಯ ಬುದ್ನಿ ಪಿಡಿ ಗ್ರಾಮದ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
2025-26ನೇ ಸಾಲಿನ ಮಾನ್ಯ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ (ಅಒಋಕ) ಮಂಜೂರಾದ ರೂ. 5 ಲಕ್ಷ ಅನುದಾನದಲ್ಲಿ ಈ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗಿದೆ. ಈ ಕಾಮಗಾರಿಯು ಬುದ್ನಿ ಪಿಡಿ ಗ್ರಾಮದ ಹುಳ್ಳಾಳ ಮತ್ತು ಕಲ್ಲಟ್ಟಿ ತೋಟದಿಂದ ಆರಂಭಗೊಂಡು, ಶಾಲೆಯ ಮಾರ್ಗವಾಗಿ ಪರ್ಪ ಮಲ್ಲಪ್ಪ ಖೋತ ಅವರ ತೋಟದವರೆಗೆ ಸಂಪರ್ಕ ಕಲ್ಪಿಸಲಿದೆ.
ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಸಿದ್ದು ಸವದಿ ಅವರು, "ರೈತರ ಮತ್ತು ಸಾರ್ವಜನಿಕರ ದೈನಂದಿನ ಸಂಚಾರಕ್ಕೆ ಅನುಕೂಲವಾಗುವಂತೆ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು," ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಿಕೆಪಿಎಸ್ ಅಧ್ಯಕ್ಷ ಬಸನಗೌಡ ಪಾಟೀಲ, ಬಿಜೆಪಿ ನಗರ ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ ಹಾಗೂ ಬಿಜೆಪಿ ಮುಖಂಡರಾದ ಈರ್ಪ ದಿನ್ನಿಮನಿ, ಶೇಖರ ಅಂಗಡಿ,ಶಿವಾನಂದ ಅಂಗಡಿ, ಆನಂದ ಖೋತ, ನಾಗಪ್ಪ ಖೋತ, ವಕೀಲ ರವಿ ಬಾಗಿ, ಲಕ್ಷ್ಮಣ ಖೋತ , ಶನೂರ ತೇರದಾಳ , ಮಾರುತಿ ಹಂದಿಗುಂದ, ಮಲ್ಲಿಕ ಸನದಿ, ಮಲ್ಲಿಕಾರ್ಜುನ ಹಂದಿಗುಂದ, ಬಸವರಾಜ ಹಂದಿಗುಂದ ,
ಮಲ್ಲಪ್ಪ ಹಂದಿಗುಂದ , ರಜಾಕ ಸನದಿ, ರಫೀಕ ಸನದಿ, ಹನಮಂತ ಕಾರಜೋಳ , ಮಹಾದೇವ ಕಾರಜೋಳ , ಮಹಾಲಿಂಗ ಖೋತ, ಮಹೇಶ ಖೋತ ಸೇರಿದಂತೆ ಅನೇಕ ರೈತ ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಈ ರಸ್ತೆ ಸುಧಾರಣೆಯಿಂದ ಕೃಷಿಕರಿಗೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಬಹಳಷ್ಟು ಅನುಕೂಲವಾಗಲಿದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 