25 ಲಕ್ಷ ರೂ. ವೆಚ್ಚದಲ್ಲಿ ವೆಚ್ಚದಲ್ಲಿ ನಾನಾ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ
MLA Srinivas Mane performs Bhoomi Pooja for various works costing Rs. 25 lakhs
ಲೋಕದರ್ಶನ ವರದಿ
ಹಾನಗಲ್ 27: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ 2025-26 ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಯೋಜನೆಯಡಿ 25 ಲಕ್ಷ ರೂ. ವೆಚ್ಚದಲ್ಲಿ ವೆಚ್ಚದಲ್ಲಿ ಕೋರ್ಟ್ ಹಾಲ್ ನವೀಕರಣ, ಕಟ್ಟಡಕ್ಕೆ ಬಣ್ಣ ಹಚ್ಚುವುದು, ಮೇಲ್ಛಾವಣಿ ದುರಸ್ತಿ, ಶೆಡ್ ನವೀಕರಣ ಸೇರಿದಂತೆ ನಾನಾ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ತಾಲೂಕಿನಲ್ಲಿ ಕಂದಾಯ ಇಲಾಖೆಯ ಸೇವೆಯಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ. ಹಕ್ಕುಪತ್ರ ವಿತರಣೆಯಲ್ಲಿ ರಾಜ್ಯದಲ್ಲಿಯೇ ಹಾನಗಲ್ ಮೊದಲ ಸ್ಥಾನದಲ್ಲಿದೆ. 41 ಲಕ್ಷ ಪುಟ ಕಂದಾಯ ದಾಖಲೆಗಳ ಡಿಜಿಟಲೀಕರಣ ಈಗಾಗಲೇ ಪೂರ್ಣಗೊಂಡಿದ್ದು, ದಾಖಲೆಗಳ ಬೆರಳ ತುದಿಯಲ್ಲಿ ಲಭಿಸುತ್ತಿವೆ. ನಿತ್ಯವೂ ಸಹ ತಾಲೂಕಿನ ನಾನಾ ಗ್ರಾಮಗಳಿಂದ ನೂರಾರು ಸಾರ್ವಜನಿಕರು ಕಚೇರಿಗೆ ಆಗಮಿಸುತ್ತಾರೆ. ಹಾಗಾಗಿ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಇನ್ನೂ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಕಚೇರಿಯ ಕಟ್ಟಡ ದುರಸ್ತಿಗೊಳಿಸಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಶಾಸಕ ಮಾನೆ ತಿಳಿಸಿದರು.
ತಹಶೀಲ್ದಾರ್ ರೇಣುಕಾ ಎಸ್., ಪುರಸಭೆ ಮಾಜಿ ಅಧ್ಯಕ್ಷರಾದ ರಾಧಿಕಾ ದೇಶಪಾಂಡೆ, ಮಮತಾ ಆರೆಗೊಪ್ಪ, ಮುಖ್ಯಾಧಿಕಾರಿ ವೈ.ಕೆ.ಜಗದೀಶ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಮುಖಂಡರಾದ ಈರಣ್ಣ ಬೈಲವಾಳ, ಸುರೇಶ ಮುಸುರಿ, ಲೋಕೋಪಯೋಗಿ ಇಲಾಖೆಯ ಎಇಇ ಎಸ್.ದೇವರಾಜು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 