ಚಿಕ್ಕಾಂಶಿ ಹೊಸೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಶ್ರೀನಿವಾಸ ಮಾನೆ ದಿಢೀರ್ ಭೇಟಿ
MLA Srinivasa Mane sudden visit to primary health center of Chikanshi Hosur village
ಚಿಕ್ಕಾಂಶಿ ಹೊಸೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಶ್ರೀನಿವಾಸ ಮಾನೆ ದಿಢೀರ್ ಭೇಟಿ
ಹಾನಗಲ್ 05 :ತಾಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಶ್ರೀನಿವಾಸ ಮಾನೆ ದಿಢೀರ್ ಭೇಟಿ ನೀಡಿ ಅನಧಿಕೃತವಾಗಿ ಗೈರಾದ ವೈದ್ಯರು, ಸಿಬ್ಬಂದಿಗೆ ಬಿಸಿ ಮುಟ್ಟಿಸಿದರು. ಸಿಬ್ಬಂದಿ ಹಾಜರಿ ಪುಸ್ತಕದ ಮೇಲೆ ಕಣ್ಣಾಡಿಸಿದ ಶಾಸಕ ಮಾನೆ,ಆಡಳಿತ ವೈದ್ಯಾಧಿಕಾರಿ ಮತ್ತು ಪ್ರಥಮ ದರ್ಜೆ ಸಹಾಯಕರು ಅನಧಿಕೃತವಾಗಿ ಗೈರಾಗಿದ್ದನ್ನು ಗಮನಿಸಿ,ಹಾಜರಿ ಪುಸ್ತಕದಲ್ಲಿ ನಮೂದಿಸಿದರು. ಫಾರ್ಮಸಿ ಅಧಿಕಾರಿ ವಿರುದ್ಧ ಸಹ ದೂರುಗಳಿರುವ ಬಗ್ಗೆ ಸಹ ನಮೂದಿಸಿ, ಯಾವುದೇ ಕಾರಣಕ್ಕೂ ಕರ್ತವ್ಯಲೋಪ ಸಹಿಸುವುದಿಲ್ಲ. ಮೇಲಾಧಿಕಾರಿಗಳ ಅನುಮತಿ ಪಡೆದು ರಜೆ ಪಡೆಯಬೇಕು. ಕರ್ತವ್ಯದ ಮೇಲೆ ಬೇರೆಡೆ ತೆರಳಿದರೆ ಕಡ್ಡಾಯವಾಗಿ ಹಾಜರಿ ಪುಸ್ತಕದ ಮೇಲೆ ನಮೂದಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು. ಟಿಹೆಚ್ಓ ಡಾ.ಲಿಂಗರಾಜ ಕೆ.ಜಿ. ಅವರಿಗೆ ಕರೆ ಮಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಾರ್ಯ ನಿರ್ವಹಣೆಯ ಮೇಲೆ ನಿಗಾ ವಹಿಸಬೇಕು. ಕರ್ತವ್ಯ ಮತ್ತು ಸಮಯಪಾಲನೆ ಮಾಡದವರ ವಿರುದ್ಧ ಕ್ರಮ ಜರುಗಿಸುವಂತೆ ಸೂಚಿಸಿದರು. ಓಷಧ ವಿಭಾಗ, ಒಳ ಮತ್ತು ಹೊರ ರೋಗಿಗಳ ವಿಭಾಗ, ಓಷಧ ವಿಭಾಗ ಸೇರಿದಂತೆ ಪ್ರತಿಯೊಂದು ವಿಭಾಗಗಳಿಗೂ ಭೇಟಿ ಮಾಡಿ ಸೌಲಭ್ಯಗಳ ಪರೀಶೀಲನೆ ನಡೆಸಿದರು. ಚಿಕಿತ್ಸೆಗೆ ಆಗಮಿಸಿದ್ದ ಗ್ರಾಮಸ್ಥರನ್ನು ಮಾತನಾಡಿಸಿ, ಮಾಹಿತಿ ಪಡೆದರು.ಇದೇ ಸಂದರ್ಭದಲ್ಲಿ ಕೇಂದ್ರವನ್ನು ಸ್ವಚ್ಛವಾಗಿಟ್ಟುಕೊಂಡು, ಉತ್ತಮ ಸೇವೆ ನೀಡುತ್ತಿರುವ ದಾದಿಯನ್ನು ಅಭಿನಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 