ಚೆಕ್ ಡ್ಯಾಮ ನಿರ್ಮಾಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ
MLA Vishwas Vaidya Bhumi Pooja for check dam construction work
ಯರಗಟ್ಟಿ 19: ಸಮೀಪದ ಮೆಳ್ಳಿಕೇರಿ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ ಮೆಳ್ಳಿಕೇರಿ ಗ್ರಾಮ ಹತ್ತಿರದ ಹಳ್ಳಕ್ಕೆ "ಚೆಕ್ ಡ್ಯಾಮ" (ಸೈಟ-1, 2 ್ಘ 3) ಅಂದಾಜು ಮೊತ್ತ ರೂ.65 ಲಕ್ಷ ಮತ್ತು ರೂ.70 ಲಕ್ಷ. ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಶಾಸಕ ವಿಶ್ವಾಸ ವೈದ್ಯ. ಮಳ್ಳಿಕೇರಿ ವ್ಯಾಪ್ತಿ ಪ್ರದೇಶಗಳಲ್ಲಿ ಹಳ್ಳಕ್ಕೆ ಚೆಕ್ ಡ್ಯಾಂಗಳನ್ನು ನಿರ್ಮಿಸುವುದರಿಂದ ಮಳೆಗಾಲದಲ್ಲಿ ನೀರು ನಿಂತ ಅಂತರ್ಜಲ ಹೆಚ್ಚಾಗುತ್ತದೆ.
ಕಳೆದ ಬಾರಿಯ ಪ್ರವಾಹದಲ್ಲಿ ನೀರು ನಿಲ್ಲದೇ ರಸ್ತೆಯಲ್ಲಿ ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಮುಂದೆ ಅಂತಹ ಸಮಸ್ಯೆ ಬಾರದಂತೆ ಈಗ ಸರ್ಕಾರದಿಂದ ಅನುದಾನ ತಂದು ಚೆಕ್ ಡ್ಯಾಂಗಳನ್ನು ಪುನಶ್ಚೇತನ ಗೊಳಿಸಲಾಗುತ್ತಿದೆ. ಇದರಿಂದ ಈ ಭಾಗದಲ್ಲಿ ಮಳೆ ನೀರು ನಿಂತ ಪರಿಣಾಮ ರೈತರು ವ್ಯವಸಾಯ ಮಾಡಲು ಅನುಕೂಲವಾಗುತ್ತದೆ’ ಎಂದು ತಿಳಿಸಿದರು. ಈ ವೇಳೆ ಬೆಮೂಲ ನಿರ್ದೇಶಕ ಶಂಕರ ಇಟ್ನಾಳ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ , ಆರ್ ಕೆ ಪಟಾತ್, ಪಡೆಪ್ಪ ನರಿ, ಎಪಿಎಂಸಿ ಸದಸ್ಯ ಲಕ್ಷ್ಮಣ ದಳವಾಯಿ, ನಾಗರಾಜ ದೇಸಾಯಿ , ಬಸವರಾಜ ಪೂಜೇರಿ, ಭೀಮಶಿ ಕುಲಗೋಡ,ವಿಠ್ಠಲ ದಳವಾಯಿ, ಪಕೀರ್ಪ ಕುರಬೇಟ, ಹಣಮಂತ ಇಟ್ನಾಳ, ಗೂಳಪ್ಪ ಭಾವಿಕಟ್ಟಿ, ಮಾರುತಿ ಉಪ್ಪಾರ, ಗ್ರಾಮದ ಗುರು ಹಿರಿಯರು, ಸ್ಥಳೀಯ ಮುಖಂಡರು, ರೈತಬಾಂಧವರು, ಯುವ ಮಿತ್ರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 