ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಪತ್ರ ವಿತರಿಸಿದ ಶಾಸಕ ವಿಶ್ವಾಸ ವೈದ್ಯ
MLA Vishwas Vaidya distributes appointment letters to Anganwadi workers
ಸವದತ್ತಿ 03: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಶಾಸಕ ವಿಶ್ವಾಸ ವೈದ್ಯ ಅವರು ತಮ್ಮ ಗೃಹ ಕಚೇರಿಯಲ್ಲಿ ಅಧಿಕೃತವಾಗಿ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಅವರು ಮಾತನಾಡಿ ಅಂಗನವಾಡಿ ಕೇಂದ್ರಗಳು ಮಕ್ಕಳ ಶೈಕ್ಷಣಿಕ ಜೀವನದ ಮೊದಲ ಮೆಟ್ಟಿಲು.ಇಲ್ಲಿ ಮಕ್ಕಳಿಗೆ ನೀಡುವ ಸಂಸ್ಕಾರ ಮತ್ತು ಪ್ರೀತಿ ಅವರ ಭವಿಷ್ಯದ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ.ಆದ್ದರಿಂದಕಾರ್ಯಕರ್ತೆಯರು ತಾಯಿಯ ಮಮತೆಯಿಂದ ಮಕ್ಕಳನ್ನು ಸಲಹಬೇಕು, ಎಂದು ಹೇಳಿದರು.
ಗ್ರಾಮೀಣ ಭಾಗದ ಮಕ್ಕಳ ಪೌಷ್ಟಿಕಾಂಶ, ಆರೋಗ್ಯ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಅಂಗನವಾಡಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ, ಎಂದು ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ನಿಮ್ಮ ಜವಾಬ್ದಾರಿ ದೊಡ್ಡದು. ಅಪೌಷ್ಟಿಕತೆ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿ, ಎಂದು ಕರೆ ನೀಡಿದರು. ಗ್ರಾಮ ಮಟ್ಟದಲ್ಲಿ ಇಲಾಖೆಯ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಮಾದರಿ ಸೇವೆಯನ್ನು ಸಲ್ಲಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆರಿಗೆ ಕಿವಿಮಾತು ಎಂದರು.ಈ ಸಂದರ್ಭದಲ್ಲಿ ಸಿಡಿಪಿಓ ಅಮೃತ ಸಾಣಿಕೊಪ್ಪ, ಹಾಗೂ ನೂತನವಾಗಿ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 